Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...