Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...