Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...