Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...