Homeಅಂತರಾಷ್ಟ್ರೀಯಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಬಾಂಗ್ಲಾದೇಶ: ಕೋಮು ಗಲಭೆಯ ಪ್ರಮುಖ ಆರೋಪಿ ಮಾನಸಿಕ ಅಸ್ವಸ್ಥ ಎಂದ ಕುಟುಂಬ

ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ಪೊಲೀಸರಿಗೆ ನೀಡಿದೆ.

- Advertisement -
- Advertisement -

ಬಾಂಗ್ಲಾದೇಶದ ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಭುಗಿಲೆದ್ದ ಗಲಭೆಯಿಂದಾಗಿ ಮೂವರು ಹತ್ಯೆಯಾಗಿದ್ದರು. ಇದೀಗ ಅಲ್ಲಿನ ಪೊಲೀಸರು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ 35 ವರ್ಷದ ಇಕ್ಬಾಲ್ ಹುಸೈನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ ಇತರ ಮೂವರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದಾರೆ.

ಕೊಮಿಲ್ಲಾದ ದುರ್ಗಾ ಪೂಜಾ ಮಂಟಪದಲ್ಲಿ ಖುರಾನ್ ಇರಿಸಿದ್ದಾಗಿ ಇಕ್ಬಾಲ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಡಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಇಕ್ಬಾಲ್ ಹುಸೇನ್ ಸೇರಿದಂತೆ ಇತರ ಆರೋಪಿಗಳ ವಿಚಾರಣೆಗೆ ಏಳು ದಿನಗಳ ಕಾಲಾವಕಾಶವನ್ನು ನ್ಯಾಯಾಲಯವು ನೀಡಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಈ ಗಲಭೆಯ ನಂತರ ದೇಶದ ಹಲವು ಕಡೆಗಳಲ್ಲಿ ಕೋಮುಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಕೋಮು ಹಿಂಸೆಗೆ ಪ್ರಚೋದಿಸುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಿ: ಬಾಂಗ್ಲಾ ಗೃಹ ಸಚಿವರಿಗೆ ಪ್ರಧಾನಿ ಶೇಖ್ ಹಸೀನಾ

ಶನಿವಾರ ಮಧ್ಯಾಹ್ನ ಪೊಲೀಸರು ಶಂಕಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ರಿಮಾಂಡ್‌ಗೆ ವಿನಂತಿಸಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಈ ನಾಲ್ವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಎಂ ತನ್ವೀರ್ ಅಹ್ಮದ್ ದೃಢಪಡಿಸಿದ್ದಾರೆ.

ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್, “ಕೊಮಿಲ್ಲಾ ಜಿಲ್ಲೆಯ ಸುಜಾನಗರದ ನಿವಾಸಿಯಾದ ಇಕ್ಬಾಲ್ ಹುಸೈನ್ ಅಕ್ಟೋಬರ್ 13 ರಂದು ನಾನುವಾ ದಿಘಿರ್ ಪರ್ ಪೂಜಾ ಮಂಟಪದಲ್ಲಿ ಕುರಾನ್ ಪ್ರತಿಯನ್ನು ಇರಿಸಿದ್ದನು” ಎಂದು ತಿಳಿಸಿದ್ದಾರೆ.

ಕುರಾನ್‌ನೊಂದಿಗೆ ಪೂಜಾ ಮಂಟಪಕ್ಕೆ ತೆರಳಿ ಹನುಮಂತ ವಿಗ್ರಹದ ಕೈಯ್ಯಲ್ಲಿ ಇರುವ ಗದೆಯನ್ನು ಕದ್ದಿದ್ದನು. ಈ ವೇಳೆ ಆತ ತನ್ನ ಕೈಯ್ಯಲ್ಲಿ ಇರುವ ಕುರಾನ್‌ ಅ‌ನ್ನು ಅದರ ಮಡಿಲಲ್ಲಿ ಇರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಇಕ್ಬಾಲ್‌ನ ಕುಟುಂಬ ಸದಸ್ಯರು, ಆತ ಮಾನಸಿಕ ಅಸ್ವಸ್ಥನಾಗಿದ್ದು, ಅವನ ಸ್ಥಿತಿಯನ್ನು ಬಳಸಿಕೊಂಡು ಬೇರೆ ಯಾರೊ ಕುರಾನ್ ಅನ್ನು ಇರಿಸುವಂತೆ ಮಾಡಿರಬಹುದು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ: ಹಿಂದೂಗಳಿಗೆ ಸೇರಿದ 29 ಮನೆಗಳಿಗೆ ಬೆಂಕಿ, 66 ಮನೆಗಳು ಧ್ವಂಸ

ಇಕ್ಬಾಲ್ ಪೂಜಾ ಸ್ಥಳದಲ್ಲಿ ಕುರಾನ್ ಅನ್ನು ಇರಿಸಿದ ನಂತರ, ಇದರ ಬಗ್ಗೆ ಪೊಲೀಸರಿಗೆ ತಿಳಿಸಲು ಇಕ್ರಾಮ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದನು. ಪೊಲೀಸ್ ಅಧಿಕಾರಿ ಅನ್ವರುಲ್ ಅಜೀಂ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಸಾಮಾನ್ಯ ಉಡುಪಿನಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದರು.

ಪ್ರಮುಖ ಆರೋಪಿ (ಕೃಪೆ: dhakatribune)

ಮತ್ತೊಬ್ಬ ಸ್ಥಳೀಯ ವ್ಯಕ್ತಿಯಾದ ಫಯಾಜ್ ಅಹ್ಮದ್‌ ಇದನ್ನು ಇತರರಿಗೂ ತಿಳಿಸಲು ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆರಂಬಿಸಿದ್ದಾನೆ. “ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಈ ವಿಷಯವನ್ನು ಪ್ರಸಾರ ಮಾಡಿದ್ದೇನೆ ಎಂದು ಫಯಾಜ್‌ ಪೊಲೀಸರಿಗೆ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ತನ್ನ ಕೃತ್ಯವನ್ನು ಎಸಗುವುದಕ್ಕೂ ಮೊದಲು ಮುಸ್ಲಿಂ ಧಾರ್ಮಿಕ ಕೇಂದ್ರದ ಇಬ್ಬರನ್ನು ಭೇಟಿಯಾಗಿದ್ದನು ಎಂಬುವುದು ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಡಾಕಾ ಟ್ರಿಬ್ಯೂನ್ ದೃಡಪಡಿಸಿದೆ. ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ. ಅವರ ಭೇಟಿಯ ನಂತರ ಆರೋಪಿ ಕುರಾನ್‌ ತೆಗೆದುಕೊಂಡು ಪೂಜಾ ಸ್ಥಳಕ್ಕೆ ತೆರಳಿದ್ದಾನೆ.

ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಬಾಂಗ್ಲಾ ಪ್ರಧಾನಿ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಉದ್ವಿಗ್ನತೆ ಹೆಚ್ಚಾಗಿ ನಗರದ ಹಲವಾರು ದೇವಸ್ಥಾನಗಳು ಮತ್ತು ಪೂಜಾ ಸ್ಥಳಗಳ ಮೇಲೆ ಮಧ್ಯಾಹ್ನ ದಾಳಿ ನಡೆದಿವೆ. ನಂತರ ಈ ಗಲಭೆ ದೇಶದ ಇತರ ಕಡೆಗೆಲ್ಲಾ ಹರಡಿ ಹಿಂಸಾಚಾರದಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಅನೇಕ ಹಿಂದೂಗಳ ಮನೆಗಳು ಮತ್ತು ವ್ಯಾಪಾರದ ಸ್ಥಳಗಳನ್ನು ಧ್ವಂಸಗೊಳಿಸಲಾಗಿತ್ತು.

ಕಾಕ್ಸ್ ಬಜಾರ್‌ನ ಶುಗಂಧಾ ಬೀಚ್ ಪ್ರದೇಶದಲ್ಲಿ ಗುರುವಾರ ರಾತ್ರಿ 10: 10 ರ ಸುಮಾರಿಗೆ ಪ್ರಮುಖ ಆರೋಪಿ ಇಕ್ಬಾಲ್‌ನನ್ನು ಬಂಧಿಸಲಾಗಿದೆ ಎಂದು ಕೊಮಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಫಾರೂಕ್ ಅಹ್ಮದ್ ತಿಳಿಸಿದ್ದರು.

ಈ ನಡುವೆ ಬಾಂಗ್ಲಾದೇಶದ ಕಮ್ಯುನಿಷ್ಟ್‌ ಪಕ್ಷಗಳು ಮತ್ತು ಎಡಪಂಥೀಯ ಸಂಘಟನೆಗಳು ಅಲ್ಪಸಂಖ್ಯಾತರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗಳು ನಡೆಸಿವೆ. ಜೊತಗೆ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಪರವಾಗಿ ಹೋರಾಟ ನಡೆಸುತ್ತಿವೆ. ಇದರ ಜೊತೆಗೆ ಅಲ್ಲಿನ ಆಡಳಿತ ಪಕ್ಷ ಕೂಡಾ ಕೋಮುವಾದಿಗಳ ಹೆಡೆಮುರಿ ಕಟ್ಟುವವರೆಗೂ ಬೀದಿಯಲ್ಲಿ ಇರುತ್ತೇವೆ ಎಂದು ಹೇಳಿಕೆ ನೀಡಿದೆ.

ಇದನ್ನೂ ಓದಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...