Homeಮುಖಪುಟಕೃಷಿ ನೀತಿಯ ಮರುಚಿಂತನೆ ಇಂದಿನ ಅಗತ್ಯ: ತನ್ನ ಪಕ್ಷದ ವಿರುದ್ದ ಮತ್ತೆ ದಾಳಿ ಮಾಡಿದ BJP...

ಕೃಷಿ ನೀತಿಯ ಮರುಚಿಂತನೆ ಇಂದಿನ ಅಗತ್ಯ: ತನ್ನ ಪಕ್ಷದ ವಿರುದ್ದ ಮತ್ತೆ ದಾಳಿ ಮಾಡಿದ BJP ಸಂಸದ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ತನ್ನ ಪಕ್ಷದ ವಿರುದ್ದ ದಾಳಿ ಮಾಡುವುದನ್ನು ಮತ್ತೆ ಮುಂದುವರೆಸಿದ್ದಾರೆ. ರೈತರು ತಮ್ಮ ಭತ್ತಕ್ಕೆ ಬೆಂಕಿ ಹಾಕುವ ವಿಡಿಯೊವನ್ನು ಶನಿವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಈ ವ್ಯವಸ್ಥೆ ರೈತರನ್ನು ಎಲ್ಲಿ ನಿಲ್ಲುವಂತೆ ಮಾಡಿದೆ? ಕೃಷಿ ನೀತಿಯನ್ನು ಮರುಚಿಂತನೆ ಮಾಡುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದ್ದಾರೆ.

ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೈತ ಎನ್ನಲಾಗಿರುವ ವ್ಯಕ್ತಿಯೊಬ್ಬರು ತನ್ನ ಬೆಳೆಗೆ ಇಂಧನವನ್ನು ಸುರಿಯುವುದನ್ನು ಕಾಣಬಹುದು. ಕೆಲವರು ಅವರನ್ನು ತಡೆಯಲು ಪ್ರಯತ್ನಿಸಿದರೂ, ಅವರು ಇಡೀ ಬೆಳೆಗೆ ಬೆಂಕಿ ಹಚ್ಚುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ವರುಣ್ ಗಾಂಧಿ ಟ್ವಿಟರ್‌ನಲ್ಲಿ, “ಉತ್ತರ ಪ್ರದೇಶದ ರೈತರಾದ ಸಮೋಧ್ ಸಿಂಗ್, ಕಳೆದ 15 ದಿನಗಳಿಂದ ತನ್ನ ಭತ್ತದ ಬೆಳೆಯನ್ನು ಮಾರಲು ಮಂಡಿಯಲ್ಲಿ ಅಲೆದಾಡುತ್ತಿದ್ದಾರೆ. ಆದರೆ, ಭತ್ತ ಮಾರಾಟವಾಗದಿದ್ದಾಗ ಹತಾಶನಾಗಿ ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವ್ಯವಸ್ಥೆಯು ರೈತರನ್ನು ಎಲ್ಲಿ ನಿಲ್ಲುವಂತೆ ಮಾಡಿದೆ? ಕೃಷಿ ನೀತಿಯನ್ನು ಮರುಚಿಂತನೆ ಮಾಡುವುದು ಇಂದಿನ ಅಗತ್ಯವಾಗಿದೆ” ಎಂದು ಬರೆದು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

 

ಇದನ್ನೂ ಓದಿ: ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

ವರುಣ್ ಗಾಂಧಿ ಇತ್ತೀಚೆಗೆ ಬಿಜೆಪಿ ವಿರುದ್ದ ತೀವ್ರ ದಾಳಿಯನ್ನು ಮಾಡುತ್ತಿದ್ದಾರೆ. ಆದರೆ ಈ ಬಾರಿ ನೇರ ದಾಳಿಯನ್ನು ಮಾಡದೆ, ಸರ್ಕಾರವು ಕೃಷಿ ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ತಡವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಅವರು ರಾಜ್ಯದ ಟೆರೈ ಪ್ರದೇಶದಲ್ಲಿ ಪ್ರವಾಹದ ಫೋಟೋಗಳನ್ನು ಟ್ವೀಟ್ ಮಾಡಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಟೆರೈನ ಬಹುಭಾಗ ಜಲಾವೃತಗೊಂಡಿದೆ. ಅವರಿಗೆ ಪಡಿತರವನ್ನು ನೀಡುವುದರಿಂದ ಈ ವಿಪತ್ತು ಮುಗಿಯುವವರೆಗೂ ಯಾವುದೇ ಕುಟುಂಬವು ಹಸಿವಿನಿಂದ ಬಳಲುವುದಿಲ್ಲ. ಆದರೆ ಪ್ರತಿಯೊಂದು ವಿಷಯದಲ್ಲೂ ವೈಯಕ್ತಿಕವಾಗಿ ನೇತೃತ್ವದ ಬೇಕೆಂದರೆ ಹೇಗೆ, ಆಡಳಿತ ಅಂದರೆ ಏನು? ಎಂದು ಅವರು ಪ್ರಶ್ನಿಸಿದ್ದರು.

ವರುಣ್ ಗಾಂಧಿ ಅವರು ಇತ್ತೀಚೆಗೆ ಲಖಿಂಪುರ್‌ ಖೇರಿ ಘಟನೆಯ ಬಗ್ಗೆ ಬಿಜೆಪಿ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ ನಂತರ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರ ಹಾಕಿತ್ತು.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...