Homeಮುಖಪುಟಕೃಷಿ ನೀತಿಯ ಮರುಚಿಂತನೆ ಇಂದಿನ ಅಗತ್ಯ: ತನ್ನ ಪಕ್ಷದ ವಿರುದ್ದ ಮತ್ತೆ ದಾಳಿ ಮಾಡಿದ BJP...

ಕೃಷಿ ನೀತಿಯ ಮರುಚಿಂತನೆ ಇಂದಿನ ಅಗತ್ಯ: ತನ್ನ ಪಕ್ಷದ ವಿರುದ್ದ ಮತ್ತೆ ದಾಳಿ ಮಾಡಿದ BJP ಸಂಸದ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ತನ್ನ ಪಕ್ಷದ ವಿರುದ್ದ ದಾಳಿ ಮಾಡುವುದನ್ನು ಮತ್ತೆ ಮುಂದುವರೆಸಿದ್ದಾರೆ. ರೈತರು ತಮ್ಮ ಭತ್ತಕ್ಕೆ ಬೆಂಕಿ ಹಾಕುವ ವಿಡಿಯೊವನ್ನು ಶನಿವಾರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಈ ವ್ಯವಸ್ಥೆ ರೈತರನ್ನು ಎಲ್ಲಿ ನಿಲ್ಲುವಂತೆ ಮಾಡಿದೆ? ಕೃಷಿ ನೀತಿಯನ್ನು ಮರುಚಿಂತನೆ ಮಾಡುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದ್ದಾರೆ.

ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರೈತ ಎನ್ನಲಾಗಿರುವ ವ್ಯಕ್ತಿಯೊಬ್ಬರು ತನ್ನ ಬೆಳೆಗೆ ಇಂಧನವನ್ನು ಸುರಿಯುವುದನ್ನು ಕಾಣಬಹುದು. ಕೆಲವರು ಅವರನ್ನು ತಡೆಯಲು ಪ್ರಯತ್ನಿಸಿದರೂ, ಅವರು ಇಡೀ ಬೆಳೆಗೆ ಬೆಂಕಿ ಹಚ್ಚುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ವರುಣ್ ಗಾಂಧಿ ಟ್ವಿಟರ್‌ನಲ್ಲಿ, “ಉತ್ತರ ಪ್ರದೇಶದ ರೈತರಾದ ಸಮೋಧ್ ಸಿಂಗ್, ಕಳೆದ 15 ದಿನಗಳಿಂದ ತನ್ನ ಭತ್ತದ ಬೆಳೆಯನ್ನು ಮಾರಲು ಮಂಡಿಯಲ್ಲಿ ಅಲೆದಾಡುತ್ತಿದ್ದಾರೆ. ಆದರೆ, ಭತ್ತ ಮಾರಾಟವಾಗದಿದ್ದಾಗ ಹತಾಶನಾಗಿ ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವ್ಯವಸ್ಥೆಯು ರೈತರನ್ನು ಎಲ್ಲಿ ನಿಲ್ಲುವಂತೆ ಮಾಡಿದೆ? ಕೃಷಿ ನೀತಿಯನ್ನು ಮರುಚಿಂತನೆ ಮಾಡುವುದು ಇಂದಿನ ಅಗತ್ಯವಾಗಿದೆ” ಎಂದು ಬರೆದು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

 

ಇದನ್ನೂ ಓದಿ: ’5 ವರ್ಷದಿಂದ ಕಾರ್ಯಕಾರಣಿಯ ಒಂದು ಸಭೆಗೂ ಹಾಜರಾಗಿಲ್ಲ’- ಬಿಜೆಪಿ ಸಂಸದ ವರುಣ್ ಗಾಂಧಿ

ವರುಣ್ ಗಾಂಧಿ ಇತ್ತೀಚೆಗೆ ಬಿಜೆಪಿ ವಿರುದ್ದ ತೀವ್ರ ದಾಳಿಯನ್ನು ಮಾಡುತ್ತಿದ್ದಾರೆ. ಆದರೆ ಈ ಬಾರಿ ನೇರ ದಾಳಿಯನ್ನು ಮಾಡದೆ, ಸರ್ಕಾರವು ಕೃಷಿ ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ತಡವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಅವರು ರಾಜ್ಯದ ಟೆರೈ ಪ್ರದೇಶದಲ್ಲಿ ಪ್ರವಾಹದ ಫೋಟೋಗಳನ್ನು ಟ್ವೀಟ್ ಮಾಡಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಟೆರೈನ ಬಹುಭಾಗ ಜಲಾವೃತಗೊಂಡಿದೆ. ಅವರಿಗೆ ಪಡಿತರವನ್ನು ನೀಡುವುದರಿಂದ ಈ ವಿಪತ್ತು ಮುಗಿಯುವವರೆಗೂ ಯಾವುದೇ ಕುಟುಂಬವು ಹಸಿವಿನಿಂದ ಬಳಲುವುದಿಲ್ಲ. ಆದರೆ ಪ್ರತಿಯೊಂದು ವಿಷಯದಲ್ಲೂ ವೈಯಕ್ತಿಕವಾಗಿ ನೇತೃತ್ವದ ಬೇಕೆಂದರೆ ಹೇಗೆ, ಆಡಳಿತ ಅಂದರೆ ಏನು? ಎಂದು ಅವರು ಪ್ರಶ್ನಿಸಿದ್ದರು.

ವರುಣ್ ಗಾಂಧಿ ಅವರು ಇತ್ತೀಚೆಗೆ ಲಖಿಂಪುರ್‌ ಖೇರಿ ಘಟನೆಯ ಬಗ್ಗೆ ಬಿಜೆಪಿ ವಿರುದ್ದ ಆಕ್ರೊಶ ವ್ಯಕ್ತಪಡಿಸಿದ ನಂತರ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರ ಹಾಕಿತ್ತು.

ಇದನ್ನೂ ಓದಿ: ‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...