Homeಮುಖಪುಟಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

- Advertisement -
- Advertisement -

ಬಾಲಿವುಡ್ ನಟ ಶಾರುಖ್ ಖಾನ್‌ ಪುತ್ರ ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವೀಡಿಯೊವೊಂದನ್ನು ಶಿವಸೇನೆ ಸಂಸದ ಸಂಜಯ್‌‌ ರಾವತ್ ಹಂಚಿಕೊಂಡಿದ್ದು, ಡ್ರಗ್ಸ್ ಪ್ರಕರಣದ ಕುರಿತು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, “ಆಘಾತಕಾರಿ” ಎಂದು ಕರೆದಿದ್ದಾರೆ. ಎನ್‌ಸಿಬಿ ಅವರು ಆರ್ಯನ್ ಡ್ರಗ್ಸ್ ಪ್ರಕರಣದ ಸಾಕ್ಷಿಗಳನ್ನು ಖಾಲಿ ಕಾಗದಕ್ಕೆ ಸಹಿ ಹಾಕಿಸಿರುವುದು ಅಘಾತಕಾರಿಯಾಗಿದೆ ಎಂದು ಆರೋಪಿಸಿದ್ದಾರೆ.

“ಪ್ರಕರಣವು ಮಹಾರಾಷ್ಟ್ರದ ಹೆಸರನ್ನು ಹಾಳುಮಾಡುವ ಪ್ರಯತ್ನವಾಗಿದೆ” ಎಂದು ಸಂಜಯ್ ರಾವತ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಆರ್ಯನ್‌ ಖಾನ್‌ಗೆ ಡ್ರಗ್ಸ್ ಪೂರೈಕೆ ಆರೋಪ ನಿರಾಕರಿಸಿದ ನಟಿ ಅನನ್ಯ ಪಾಂಡೆ: ವರದಿ

ಸಂಜಯ್ ರಾವತ್‌ ಹೊಸ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡು, “ ಎನ್‌ಸಿಬಿ ಅವರು ಆರ್ಯನ್ ಡ್ರಗ್ಸ್ ಪ್ರಕರಣದ ಸಾಕ್ಷಿಗಳನ್ನು ಖಾಲಿ ಕಾಗದಕ್ಕೆ ಸಹಿ ಹಾಕಿಸಿರುವುದು ಅಘಾತಕಾರಿಯಾಗಿದೆ. ಅವರಿಗೆ ಭಾರೀ ಹಣದ ಬೇಡಿಕೆ ನೀಡಲಾಗಿತ್ತು ಎಂದು ವರದಿಗಳಿವೆ. ಸಿಎಂ ಉದ್ಧವ್ ಠಾಕ್ರೆ ಈ ಪ್ರಕರಣ ಮಹಾರಾಷ್ಟ್ರವನ್ನು ಅವಹೇಳನ ಮಾಡಲು ಮಾಡಲಾಗಿದೆ ಎಂದು ಹೇಳಿದರು. ಇದು ನಿಜವಾಗುತ್ತಿರುವಂತೆ ತೋರುತ್ತಿದ್ದು, ಮಹಾರಾಷ್ಟ್ರದ ಗೃಹಮಂತ್ರಿಗಳೆ ಪೋಲಿಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ: ಪೇಪರ್‌ವರ್ಕ್‌ಗಾಗಿ ನಟ ಶಾರುಖ್ ಖಾನ್ ಮನೆಗೆ ಎನ್‌ಸಿಬಿತಲೆಮರೆಸಿಕೊಂಡಿರುವ ಕೆಪಿ ಗೋಸಾವಿಯ ಸಹಾಯಕ ಪ್ರಭಾಕರ್ ಸೈಲ್, ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಖಾಲಿ ಪಂಚನಾಮಕ್ಕೆ ಸಹಿ ಹಾಕಿಸಿದ್ದರು ಎಂದು ಆರೋಪಿಸಿದ್ದಾರೆ. ಇದರ ಬೆನ್ನಿಗೆ ಸಂಜಯ್ ರಾವತ್ ಈ ಬಗ್ಗೆ ಆರೋಪಿಸಿದ್ದಾರೆ.

“ನಾನು ಗೋಸಾವಿಯ ಅಂಗರಕ್ಷಕನಾಗಿ ಕೆಲಸ ಮಾಡುತ್ತಿದ್ದೆ. ಎನ್‌ಸಿಬಿ ದಾಳಿ ನಡೆಸಿದ ರಾತ್ರಿ ತಾನು ಗೋಸಾವಿಯ ಜೊತೆಗಿದ್ದೆ. ಅಧಿಕಾರಿಗಳು ಪಂಚನಾಮವಾಗಿ ಖಾಲಿ ಕಾಗದಗಳಿಗೆ ಸಹಿ ಹಾಕುವಂತೆ ಮಾಡಿದ್ದಾರೆ” ಎಂದು ಪ್ರಭಾಕರ್‌ ಸೈಲ್ ಹೇಳಿದ್ದಾರೆ ಎಂದು ಇಂಡಿಯಾ ಟುಡೆ ಹೇಳಿದ್ದಾರೆ.

 

ಕೆಪಿ ಗೋಸಾವಿ ‘ಅನುಮಾನಾಸ್ಪದವಾಗಿ’ ನಾಪತ್ತೆಯಾದ ನಂತರ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ಸೈಲ್ ಆರೋಪಿಸಿದ್ದಾರೆ.

ಇದೇ ವೇಳೆ ಪ್ರಭಾಕರ್ ಸೈಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಮೀರ್ ವಾಂಖೆಡೆ, ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದರು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಮಗ ಆರ್ಯನ್ ಖಾನ್‌ರನ್ನು ಭೇಟಿಯಾದ ನಟ ಶಾರುಖ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...