Homeಸಿನಿಮಾಕ್ರೀಡೆಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ "Spirit of Cricket" ಎಂದು ಬರೆದಿದೆ.

- Advertisement -
- Advertisement -

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.

ಸೋತದ್ದು ಒಂದು ಪಂದ್ಯ ಮಾತ್ರ, ಆದರೆ ಗೆದ್ದದ್ದು ಸಹಸ್ರಾರು ಹೃದಯ!
Well done ವಿರಾಟ್ ಕೊಹ್ಲಿ ಎಂದು ರಂಜನ್ ಪ್ರಸಾದ್‌ರವರು ಪ್ರತಿಕ್ರಿಯಿಸಿದ್ದಾರೆ.

ವಿರಾಟ್ ಕೋಹ್ಲಿ ಓರ್ವ ಪ್ರಬುದ್ಧ ಆಟಗಾರ.‌ ಪಂದ್ಯ ಸೋತರೂ ಕೂಡಾ ಪಾಕಿಸ್ತಾನವೂ ಸೇರಿದಂತೆ ವಿಶ್ವದೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳ ಹೃದಯವನ್ನು ಗೆದ್ದ ಕ್ಯಾಪ್ಟನ್ ಎಂದು ಪುನೀತ್ ಅಪ್ಪುರವರು ಬರೆದಿದ್ದಾರೆ.

ನಿಜವಾಗಿಯೂ ಕ್ರಿಕೆಟ್ ಗೆದ್ದಿದೆ..ಅಭಿನಂದನೆಗಳು ಎಂದು ಸುಲೈಮಾನ್ ಕಲ್ಲರ್ಪೆಯವರು ಬರೆದಿದ್ದಾರೆ.

ಪಾಕಿಸ್ತಾನ ತಂಡ ಚೆನ್ನಾಗಿ ಆಟವಾಗಿದೆ. ಭಾರತದಿಂದ ಅವರಿಗೆ ಪ್ರೀತಿಪೂರ್ವಕ ಅಭಿನಂದನೆಗಳು ಎಂದು ಹಲವಾರು ಜನ ಶುಭ ಕೋರಿದ್ದಾರೆ.

ಪಂದ್ಯ ಆರಂಭಕ್ಕೂ ಮುನ್ನವೇ ಹಲವು ಮಾಧ್ಯಮಗಳು ಭಾರತ-ಪಾಕ್ ಪಂದ್ಯವನ್ನು ವಿಶ್ವಯುದ್ಧವೆಂಬಂತೆ ಬಿಂಬಿಸಿದ್ದವು. ಅಲ್ಲದೇ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂಬಂತೆ ಕರೆದಿದ್ದವು. ಆದರೆ ಅದನ್ನು ಸ್ವತಃ ಭಾರತದ ತಂಡ ಸುಳ್ಳು ಮಾಡಿತು. ಭಾರತದ ಎಲ್ಲಾ ಆಟಗಾರರು ಕ್ರೀಡಾಸ್ಫೂರ್ತಿ ಮೆರೆದರು. ಹಾಗಾಗಿ ಹಲವಾರು ಕ್ರೀಡಾಭಿಮಾನಿಗಳು ಕೊಹ್ಲಿ ಮತ್ತು ಧೋನಿ ನಡೆಯನ್ನು ಪ್ರೀತಿಯಿಂದ ಬೆಂಬಲಿಸಿದರು.


ಇದನ್ನೂ ಓದಿ; ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...