Homeಮುಖಪುಟಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಬಜರಂಗದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

- Advertisement -
- Advertisement -

ಭೋಪಾಲ್‌ನಲ್ಲಿ ವೆಬ್ ಸರಣಿಯೊಂದರ ಚಿತ್ರೀಕರಣ ನಡೆಸುತ್ತಿದ್ದ ಚಲನಚಿತ್ರ ನಿರ್ಮಾಪಕ ಪ್ರಕಾಶ್ ಝಾ ಅವರ ಮೇಲೆ ಬಿಜೆಪಿ ಬೆಂಬಲಿತ ಗುಂಪಾದ ಬಜರಂಗ ದಳದ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆ ಭಾನುವಾರ ನಡೆದಿದೆ. ಆದರೆ ಅವರು ಇನ್ನೂ ಬಜರಂಗದಳದ ವಿರುದ್ದ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಚಿತ್ರೀಕರಣದ ಸೆಟ್‌ನಲ್ಲಿನ ಸಿಬ್ಬಂದಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸಿಬ್ಬಂದಿಯೊಬ್ಬರನ್ನು ಹಿಡಿದು ಅವರ ಮೇಲೆ ದುಷ್ಕರ್ಮಿಗಳು ಮೆಟಲ್‌ ಲೈಟ್‌ ಸ್ಟ್ಯಾಂಡ್‌ನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದು ವಿಡಿಯೊದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಕರಾವಳಿ: ಯುವಜನರ ಕೈಗೆ ಶಸ್ತ್ರ ನೀಡಿದ ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳ

ಬಾಬಿ ಡಿಯೋಲ್ ನಟಿಸಿದ ಪ್ರಕಾಶ್ ಝಾ ಅವರ ವೆಬ್ ಸರಣಿ ‘ಆಶ್ರಮ್‌’ ಹಿಂದೂ ಧರ್ಮದ ಮೇಲಿನ ಆಕ್ರಮಣವಾಗಿದ್ದು, ಶೀರ್ಷಿಕೆಯನ್ನು ಬದಲಾಯಿಸುವವರೆಗೂ ಅದರ ಚಿತ್ರೀಕರಣವನ್ನು ಮಾಡಲು ಬಿಡುವುದಿಲ್ಲ ಎಂದು ಬಜರಂಗ ದಳದ ಕಾರ್ಯಕರ್ತರು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರಕಾಶ್ ಝಾ ಇನ್ನೂ ಯಾವುದೆ ದೂರು ದಾಖಲಿಸಿಲ್ಲ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಜೊತೆಗೆ ಅವರು ವೆಬ್‌ ಸರಣಿಯ ಹೆಸರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಜರಂಗದಳದ ನಾಯಕ ತಿಳಿಸಿದ್ದಾರೆ ಎಂದು ಅದು ವರದಿ ಮಾಡಿದೆ.

ಭಾನುವಾರ ಸಂಜೆ ಅರೆರಾ ಹಿಲ್ಸ್‌ನಲ್ಲಿನ ಓಲ್ಡ್ ಜೈಲ್ ಆವರಣದಲ್ಲಿರುವ ಸೆಟ್‌ನ ಮೇಲೆ ದಾಳಿ ಮಾಡಿರುವ ಬಜರಂಗ ದಳದ ಸದಸ್ಯರ “ಪ್ರಕಾಶ್ ಝಾ ಮುರ್ದಾಬಾದ್”, “ಬಾಬಿ ಡಿಯೋಲ್ ಮುರ್ದಾಬಾದ್” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗಿದ್ದಾರೆ.

“ಅವರು ಆಶ್ರಮ 1, ಆಶ್ರಮ 2 ಅನ್ನು ಮಾಡಿದ್ದಾರೆ. ಇಲ್ಲಿ ಆಶ್ರಮ 3 ರ ಚಿತ್ರೀಕರಣ ಮಾಡುತ್ತಿದ್ದರು. ಗುರುಗಳು ಮಹಿಳೆಯರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಪ್ರಕಾಶ್ ಜಾ ಅದರಲ್ಲಿ ತೋರಿಸಿದ್ದಾರೆ. ಚರ್ಚ್ ಅಥವಾ ಮದ್ರಸದ ಬಗ್ಗೆ ಅಂತಹ ಚಲನಚಿತ್ರವನ್ನು ಮಾಡಲು ಅವರಿಗೆ ಧೈರ್ಯವಿದೆಯೇ?” ಎಂದು ಭಜರಂಗದಳದ ನಾಯಕ ಸುಶೀಲ್ ಸುರ್ಹೆಲೆ ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಟಾರ್ಗೆಟ್‌ ಮಾಡಿದ್ದ ನಾಲ್ವರು ಮುಸ್ಲಿಂ ಯುವಕರ ಬಂಧನ

“ಈ ಚಿತ್ರವನ್ನು ಮಾಡಲು ಬಿಡುವುದಿಲ್ಲ ಎಂದು ಭಜರಂಗದಳದ ಮೂಲಕ ಅವರಿಗೆ ಸವಾಲು ಹಾಕುತ್ತಿದ್ದೇವೆ. ಈಗ ಪ್ರಕಾಶ್ ಝಾ ಅವರ ಮುಖಕ್ಕೆ ಮಾತ್ರ ಮಸಿ ಬಳಿದಿದ್ದೇವೆ. ನಾವು ಬಾಬಿ ಡಿಯೋಲ್‌ ಅವರನ್ನು ಕೂಡಾ ಹುಡುಕುತ್ತಿದ್ದೇವೆ. ಅವರು ತನ್ನ ಸಹೋದರ ಸನ್ನಿ ಡಿಯೋಲ್‌ ಮೂಲಕ ಆದರೂ ಕಲಿಯಬೇಕು. ಅವರು ಎಂತಹ ದೇಶಭಕ್ತಿಯ ಚಲನಚಿತ್ರಗಳನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕಾಶ್ ಝಾ ತಂಡದಿಂದ ಯಾರೊಬ್ಬರೂ ಆರೋಪಗಳನ್ನು ಮಾಡದಿದ್ದರೂ, ಸಂಬಂಧಪಟ್ಟವರನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

“ಚಿತ್ರೀಕರಣದ ಸೆಟ್‌ ಮೇಲೆ ದಾಳಿ ಅಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರನ್ನು ಬಂಧಿಸಲಾಗುವುದು. ಸಮಾಜಿಕ ವಿರೋಧಿಗಳು ವಾಹನಗಳನ್ನು ದೋಚಿ ತೊಂದರೆ ಮಾಡಿದ್ದಾರೆ. ಚಿತ್ರ ನಿರ್ಮಾಣಕ್ಕೆ ಭದ್ರತೆ ನೀಡಲಾಗುವುದು ಮತ್ತು ಈ ರೀತಿಯ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಇರ್ಷಾದ್ ವಾಲಿ ಹೇಳಿದ್ದಾರೆ.

2017 ರಲ್ಲಿ, ಮತ್ತೊಂದು ಬಲಪಂಥೀಯ ಗುಂಪಾದ ಕರ್ಣಿ ಸೇನೆಯು ದೀಪಿಕಾ ಪಡುಕೋಣೆ ಅಭಿನಯದ ‘ಪದ್ಮಾವತ್’ ಚಿತ್ರದ ಸೆಟ್‌ಗಳ ಮೇಲೆ ದಾಳಿ ಮಾಡಿ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿತ್ತು. ಜೊತೆಗೆ ಚಿತ್ರದ ದೃಶ್ಯಗಳನ್ನು ಮಾರ್ಪಡಿಸಲು ಮತ್ತು ಅದರ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು.

ಇದನ್ನೂ ಓದಿ: ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...