Homeಸಿನಿಮಾಕ್ರೀಡೆಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

- Advertisement -
- Advertisement -

2021ರ ಐಸಿಸಿ ಪುರುಷರ T20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋತ ನಂತರ ತಾಪ್ಸಿ ಪನ್ನು, ರಿಚಾ ಚಡ್ಡ, ಪ್ರೀತಿ ಜಿಂಟಾ ಸೇರಿದಂತೆ ಬಾಲಿವುಡ್‌ನಲ್ಲಿರುವ ಕ್ರೀಡಾ ಪ್ರೇಮಿಗಳು ಭಾರತ ತಂಡವನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ.

ಬಾಜಿಗರ್‌ ಸಿನಿಮಾದ ಶಾರುಖ್‌ ಖಾನ್‌ ಅವರ ಸಂಭಾಷಣೆಯನ್ನು ನೆನಪಿಸಿಕೊಂಡಿರುವ ನಟಿ ತಾಪ್ಸಿ ಪನ್ನು, ‘ಸೋತು ಗೆದ್ದವರನ್ನು ಬಾಜಿಗರ್‌ ಎಂದು ಕರೆಯಲಾಗುತ್ತದೆ (ಹರ್‌ ಕೆ ಜೀತ್ನೆ ವಾಲೆ ಕೊ ಬಾಜಿಗರ್‌ ಕೆಹ್ತೆ ಹೈ)’ ಎಂದು ಟ್ವಿಟ್‌ ಮಾಡಿದ್ದಾರೆ.

ನಟಿ ರಿಚಾ ಚಡ್ಡಾ, ‘ಅಮೀರ್‌ ಖಾನ್‌ ಅವರ ವಿವಿಧ ಭಾವನೆಗಳನ್ನು ಒಳಗೊಂಡ ಮಿಮ್‌ ಒಂದನ್ನು ಹಂಚಿಕೊಂಡಿದ್ದು, ಕೆಲವು ಸಲ ಹೀಗಾಗುತ್ತದೆ (ಹೋ ಜಾತಾ ಹೈ ಕಬಿ ಕಬಿ)’ ಎಂದು ಟ್ವಿಟ್‌ ಮಾಡಿದ್ದಾರೆ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯವನ್ನು ಕ್ರೀಡಾಂಗಣದಲ್ಲಿಯೇ ನೇರವಾಗಿ ವೀಕ್ಷಿಸಿರುವ ಪ್ರೀತಿ ಜಿಂಟಾ ಮತ್ತವರ ಪತಿ ಜೀನ್‌ ಗುಡೆನಫ್‌ ಅವರು ಪಂದ್ಯದ ನಂತರ ಟ್ವೀಟ್ ಮಾಡಿದ್ದು, ‘Tonight We were outplayed so well played Pakistan. ನಾನೊಬ್ಬ ಕ್ರಿಕೆಟ್‌ ಅಭಿಮಾನಿಯಾಗಿ, ನಾನು ಯಾವಾಗಲೂ ನಮ್ಮ ತಂಡವನ್ನು ಬೆಂಬಲಿಸುತ್ತೇನೆ. ನನ್ನ ಹೃದಯವು ಯಾವಾಗಲೂ ತಂಡದ ಪರವಾಗಿರುತ್ತದೆ. ನೀವು ನನ್ನಂತೆ ನಿಜವಾದ ಕ್ರಿಕೆಟ್‌ ಅಭಿಮಾನಿಯಾಗಿದ್ದರೆ ನೀವು ಅದೇ ರೀತಿ ಮಾಡುತ್ತೀರಿ. ಇದು ಕೇವಲ ಟೂರ್ನಿಯ ಆರಂಭವಷ್ಟೆ. #INDvsPAK ಪಂದ್ಯದ ಉಳಿದ ಆಟಗಳಿಗೆ ಶುಭವಾಗಲಿ ಎಂದು ಬರೆದಿದ್ದಾರೆ.

“ಪಾಕಿಸ್ತಾನದ ವಿರುದ್ಧ ಸೋತಿದ್ದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ಮೇಲೆ ನಡೆಯುತ್ತಿರುವ ಮೌಕಿಕ ದಾಳಿಯನ್ನು ಖಂಡಿಸಿರುವ ಪ್ರೀತಿ, ‘2021ರ T20 ವರ್ಲ್ಡ್‌ ಕಪ್‌ನ ಮೊದಲ ಪಂದ್ಯದಲ್ಲಿ ಭಾರತವು ಸೋತಿದ್ದಕ್ಕೆ ನಿರಾಶೆಗೊಂಡಿದ್ದೇನೆ. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಆಟಗಾರರ ಬಗ್ಗೆ ಮಾಡಿದ ನಿಂದನೆಯನ್ನು ನೋಡಿ ಇನ್ನಷ್ಟು ನಿರಾಶೆಗೊಂಡಿದ್ದೇನೆ. ಇದು ಆಟವಷ್ಟೆ. ಆಟಗಾರರೆಲ್ಲರೂ ಮನುಷ್ಯರು” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನಟ ಅರ್ಜುನ್‌ ರಾಂಪಾಲ್‌ ಭಾರತ ತಂಡವನ್ನು ಹಾರೈಸಿ ಟ್ವಿಟ್‌ ಮಾಡಿದ್ದು, ‘ಹಿನ್ನೆಡೆಯು ಮುಂದೆ ನಡೆಯಲಿರುವ ಅದ್ಭುತವಾದ ಪುನರಾಗಮನದ ಸಂಕೇತವಾಗಿರುತ್ತದೆ. ನಮ್ಮ ತಂಡದ ಮುನ್ನಡೆಯನ್ನು ನೋಡಲು ಕಾತರನಾಗಿದ್ದೇನೆ. ಉಳಿದ ಎಲ್ಲಾ ಪಂದ್ಯಗಳಿಗಳಲ್ಲಿ ಉತ್ತಮ ಪ್ರದರ್ಶನ ನೀಡಲಿ. ಒಳ್ಳಯದಾಗಲಿ. ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ಅದ್ಭುತ ಗೆಲುವಿಗೆ ಪಾಕಿಸ್ತಾನಕ್ಕೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...