Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...