Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...