Homeಮುಖಪುಟ2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

- Advertisement -
- Advertisement -

2019ರ ಫೆಬ್ರುವರಿಯಲ್ಲಿ ಹೇಗೆ ಭಾರತದಲ್ಲಿ ಫೇಕ್‌ನ್ಯೂಸ್‌ಗಳು ಶರವೇಗದಲ್ಲಿ ಹರಿದಾಡಿವೆ ಎಂದು ಫೇಸ್‌ಬುಕ್‌ ಹೇಳಿಕೊಂಡಿದೆ. ಕೇವಲ 21 ದಿನಗಳಲ್ಲಿ ಭಾರತದಲ್ಲಿ ಆಲ್ಗರಿದಂ ಹೇಗೆ ವೇಗವಾಗಿ ಬೆಳೆದಿತ್ತು ಎಂಬುದನ್ನು ಫೇಸ್‌ಬುಕ್‌ ಸಂಸ್ಥೆ ಪರಿಶೀಲಿಸಿದ್ದು, ಫೇಸ್‌ಬುಕ್‌ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ ಎನ್ನಲಾಗಿದೆ.

ಕೇವಲ ಮೂರು ವಾರಗಳಲ್ಲಿ ಹೊಸ ಬಳಕೆದಾರರು ಸುಳ್ಳು ಸುದ್ದಿಗಳನ್ನು, ಪ್ರಚೋದನಕಾರಿ ಚಿತ್ರಗಳನ್ನು ಅತಿ ಹೆಚ್ಚು ಹಂಚಿಕೊಂಡಿದ್ದಾರೆ. ಶಿರಚ್ಛೇದದ ಗ್ರಾಫಿಕ್‌ ಫೋಟೋಗಳು, ಪಾಕಿಸ್ತಾನದ ಮೇಲೆ ಭಾರತದ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯ, ಹಿಂಸಾಕೃತ್ಯದ ಗ್ರಾಫಿಕ್‌ ಫೋಟೋಗಳನ್ನು ಹರಿಬಿಡಲಾಯಿತು. ಪಾಕಿಸ್ತಾನದಲ್ಲಿ 300 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂಬ ನಕಲಿ ಸುದ್ದಿಯನ್ನು ಹಂಚಿದ ಒಂದು ಗುಂಪು ನಿಮ್ಮನ್ನು ನಗಿಸುತ್ತದೆ ಎಂದು ಫೇಸ್‌ಬುಕ್‌ ಸಿಬ್ಬಂದಿ ಹೇಳಿದ್ದಾರೆ.

ವಿಷಲ್‌ಬ್ಲೋವರ್‌‌ (ನಕಲಿ ಖಾತೆಗಳನ್ನು ಪತ್ತೆ ಹಚ್ಚುವವವರು) ಫ್ರಾನ್ಸ್‌ ಹೌಗನ್‌ ನೀಡಿರುವ 46 ಪುಟಗಳ ಸಂಶೋಧನಾ ಟಿಪ್ಪಣಿಯಲ್ಲಿ, “ನನ್ನ ಜೀವಿತಾವಧಿಯಲ್ಲಿ ನೋಡಿರದಿದ್ದಷ್ಟು ಸತ್ತವರ ಫೋಟೋಗಳನ್ನು ಕೇವಲ ಮೂರು ವಾರಗಳಲ್ಲಿ ನೋಡಿದೆ” ಎಂದು ಸಿಬ್ಬಂದಿಯೊಬ್ಬರು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಟ್ರಯಲ್ ಖಾತೆಯು ಜೈಪುರದಲ್ಲಿ ವಾಸಿಸುವ ಮತ್ತು ಹೈದರಾಬಾದ್‌ನ 21 ವರ್ಷದ ಮಹಿಳೆಯ ಪ್ರೊಫೈಲ್ ಅನ್ನು ಬಳಸಿದೆ. ಬಳಕೆದಾರರು ಫೇಸ್‌ಬುಕ್‌ ಶಿಫಾರಸು ಮಾಡಿದ ಅಥವಾ ಆ ಶಿಫಾರಸುಗಳ ಮೂಲಕ ಕಾಣಿಸಿಕೊಂಡ ಪೇಜ್‌ಗಳನ್ನು, ಗುಂಪುಗಳನ್ನು ಮಾತ್ರ ಅನುಸರಿಸಿರುವುದು ತಿಳಿದುಬಂದಿದೆ. ಸಂಶೋಧನಾ ಟಿಪ್ಪಣಿಯ ಲೇಖಕರು ಈ ಅನುಭವವನ್ನು ‘ಸಮಗ್ರತೆಯ ದುಃಸ್ವಪ್ನ’ ಎಂದು ಕರೆದಿದ್ದಾರೆ.

ಕಂಪನಿಯ ಬೆಳವಣಿಗೆಯು ಭಾರತ, ಇಂಡೋನೇಷಿಯ, ಬ್ರೆಜಿಲ್‌ನಂತಹ ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಮೂಲಭೂತ ಮೇಲ್ವಿಚಾರಣೆಗೆ ಭಾಷಾ ಕೌಶಲ್ಯ ಹೊಂದಿರುವ ಜನರನ್ನು ನೇಮಿಸಿಕೊಳ್ಳಲು ಕಂಪನಿ ಹೆಣಗಾಡುತ್ತಿದೆ. 22 ಅಧಿಕೃತ ಭಾಷೆಗಳನ್ನು ಹೊಂದಿರುವ 1.3 ಬಿಲಿಯನ್ ಜನರಿರುವ ಭಾರತದಲ್ಲಿ ಈ ಸವಾಲು ವಿಶೇಷವಾಗಿ ತೀವ್ರವಾಗಿದೆ. ಫೇಸ್‌ಬುಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಕಂಟೆಂಟ್‌ನ ಉಸ್ತುವಾರಿಯನ್ನು ಆಕ್ಸೆಂಚರ್‌ನಂತಹ ಕಂಪನಿಗಳ ಗುತ್ತಿಗೆದಾರರಿಗೆ ಹೊರಗುತ್ತಿಗೆ ನೀಡುತ್ತದೆ.

“ಹಿಂದಿ ಮತ್ತು ಬಂಗಾಳಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದ್ವೇಷದ ಭಾಷಣವನ್ನು ಕಂಡುಹಿಡಿಯಲು ತಂತ್ರಜ್ಞಾನದ ಮೇಲೆ ನಾವು ಗಣನೀಯವಾಗಿ ಹೂಡಿಕೆ ಮಾಡಿದ್ದೇವೆ” ಎಂದು ಫೇಸ್‌ಬುಕ್ ವಕ್ತಾರರು ಹೇಳಿದ್ದಾರೆ. “ಪರಿಣಾಮವಾಗಿ ಜನರು ನೋಡುವ ದ್ವೇಷದ ಭಾಷಣದ ಪ್ರಮಾಣವನ್ನು ನಾವು ಈ ವರ್ಷ ಅರ್ಧದಷ್ಟು ಕಡಿಮೆ ಮಾಡಿದ್ದೇವೆ. ಇಂದು ಅದು ಶೇಕಡಾ 0.05 ಕ್ಕೆ ಇಳಿದಿದೆ” ಎಂದು ಕಂಪನಿ ಹೇಳಿಕೊಂಡಿದೆ.

“ಮುಸ್ಲಿಮರು ಸೇರಿದಂತೆ ಹಿಂದುಳಿದ ಗುಂಪುಗಳ ವಿರುದ್ಧ ದ್ವೇಷ ಭಾಷಣವು ಜಾಗತಿಕವಾಗಿ ಹೆಚ್ಚುತ್ತಿದೆ. ಆದ್ದರಿಂದ ನಾವು ನಿಯಮ ಜಾರಿಗೊಳಿಸುವಿಕೆಯನ್ನು ಸುಧಾರಿಸುತ್ತಿದ್ದೇವೆ. ದ್ವೇಷದ ಮಾತುಗಳು ಆನ್‌ಲೈನ್‌ನಲ್ಲಿ ಹುಟ್ಟಿಕೊಳ್ಳುವುತ್ತಿರುವುದರಿಂದ ನಮ್ಮ ನೀತಿಗಳನ್ನು ನವೀಕರಿಸಲು ಬದ್ಧರಾಗಿರುತ್ತೇವೆ” ಎಂದು ಫೇಸ್‌ಬುಕ್‌ ಹೇಳಿದೆ.

ವರದಿಯ ಪ್ರಕಾರ, ಹೊಸ ಬಳಕೆದಾರ ಪರೀಕ್ಷಾ ಖಾತೆಯನ್ನು ಫೆಬ್ರವರಿ 4, 2019ರಂದು ಸಂಶೋಧನಾ ತಂಡವು ಭಾರತದಲ್ಲಿ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ರಚಿಸಲಾಗಿದೆ. ಪರೀಕ್ಷಾ ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗಿರುವ ಪೋಸ್ಟ್‌ಗಳನ್ನು ಒಳಗೊಂಡಂತೆ ಫೇಸ್‌ಬುಕ್ ಶಿಫಾರಸು ಮಾಡಿದ ವಿಷಯವನ್ನು ಅನ್ವೇಷಿಸಲು ಆರಂಭಿಸಿದರು.

ಫೆ .14ರಂದು ರಾಜಕೀಯವಾಗಿ ಸೂಕ್ಷ್ಮವಾಗಿರುವ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು. ಹತ್ತಾರು ಜನರು ಗಾಯಗೊಂಡರು. ಭಾರತ ಸರ್ಕಾರ ಈ ದಾಳಿಯನ್ನು ಪಾಕಿಸ್ತಾನದ ಭಯೋತ್ಪಾದಕ ಗುಂಪು ಮಾಡಿದೆ ಎಂದು ಹೇಳಿತು. ಶೀಘ್ರದಲ್ಲೇ ಪಾಕಿಸ್ತಾನದ ವಿರೋಧಿ ದ್ವೇಷದ ಮಾತಿನ ಸುರಿಮಳೆಯಾಯಿತು. ಇದರಲ್ಲಿ ಶಿರಚ್ಛೇದದ ಚಿತ್ರಗಳು ಮತ್ತು ಪಾಕಿಸ್ತಾನಿಯರ ಗುಂಪನ್ನು ಸೋಲಿಸಲು ಸಿದ್ಧತೆಗಳನ್ನು ತೋರಿಸುವ ಗ್ರಾಫಿಕ್ ಚಿತ್ರಗಳು ಒಳಗೊಂಡಿದ್ದವು.

ರಾಷ್ಟ್ರೀಯವಾದ ಸಂದೇಶಗಳು, ಪಾಕಿಸ್ತಾನದಲ್ಲಿ ಭಾರತದ ವಾಯುದಾಳಿಗಳ ಬಗ್ಗೆ ಉತ್ಪ್ರೇಕ್ಷಿತ ಹೇಳಿಕೆಗಳು, ಬಾಂಬ್ ಸ್ಫೋಟಗಳ ನಕಲಿ ಫೋಟೋಗಳು ಮತ್ತು ದಾಳಿಯಲ್ಲಿ ಹೊಸದಾಗಿ ಮದುವೆಯಾದ ಸೇನಾ ಸಿಬ್ಬಂದಿ ತನ್ನ ಕುಟುಂಬಕ್ಕೆ ಮರಳಲು ತಯಾರಿ ನಡೆಸುತ್ತಿದ್ದಾಗ ದಾಳಿಗೆ ತುತ್ತಾಗಿದ್ದನ್ನು ಬಿಂಬಿಸಲಾಗಿತ್ತು.


ಇದನ್ನೂ ಓದಿರಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...