Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...