Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...