Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...