Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...