Homeಕರ್ನಾಟಕಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಗೋರಕ್ಷಣೆಯ ಹೊಸ ಆಯಾಮ: ಇಬ್ಬರು ಫೇಸ್‍ಬುಕ್ ಪಾಪಿಗಳು ಅಂದರ್!

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹೊಸ ಸರ್ಕಾರ ಬಂದ ಮೇಲೆ ಹಿಂದೆಲ್ಲ ತಮ್ಮನ್ನು ತಾವೇ ಕಂಟ್ರೋಲ್ ಮಾಡಿಕೊಂಡಿದ್ದ ಪುಂಡರೆಲ್ಲ ಮತ್ತೆ ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಜೈ ಹಿಂದ್ ಹೇಳುವಂತೆ ಒತ್ತಾಯಿಸಿ ಉಪವಾಸದಲ್ಲಿದ್ದ ಮುಸ್ಲಿಂ ಯುವಕನನ್ನು ಥಳಿಸಿದ್ದು ಸೇರಿದಂತೆ ದಲಿತರ ಮೇಲೆ ಅಲ್ಲಲ್ಲಿ ಹಲ್ಲೆ ನಡೆದ ವರದಿಗಳೂ ಬಂದಿವೆ. ಇನ್ನೊಂದು ಕಡೆ ಫೇಸ್‍ಬುಕ್ ಪಾಪಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸದಲ್ಲಿ ಹಿಂದಿಗಿಂತ ಜೋರಾಗಿದ್ದಾರೆ. ಅಂತಹ ಇಬ್ಬರು ಫೇಸ್‍ಬುಕ್ ಪಾಪಿಗಳನ್ನು ಈಗ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ. ಆ ಕುರಿತ ತನಿಖೆ ಶುರು ಆಗುವ ಮೊದಲೇ ಇಬ್ಬರು ಫೇಸ್‍ಬುಕ್ ಪಾಪಿಗಳು, ‘ಗೋವುಗಳನ್ನು ರಕ್ಷಣೆ ಮಾಡಲು ಹೋದ ಯುವಕನನ್ನು ಹೊಡೆದು ಕೊಂದು ಹಾಕಿ ನೇಣಿಗೇರಿಸಲಾಗಿದೆ’ ಎಂದೆಲ್ಲ ಫೇಸ್‍ಬುಕ್ ಪೋಸ್ಟ್ ಮಾಡಿದರು. ಅದನ್ನು ವ್ಯಾಟ್ಸಾಪ್‍ನಲ್ಲೂ ಹರಿಬಿಟ್ಟರು.

ಈ ಯುವಕರಿಗಿಂತ ಭಯಂಕರ ಕೆಡುಕು ಬುದ್ಧಿಯ ಸಂಸದೆ ಶೋಭಾ ಕರಂದ್ಲಾಜೆ ಇದೇ ಸತ್ಯ ಎಂಬಂತೆ ಟ್ವೀಟ್ ಮಾಡಿ, ಮುಖ್ಯಮಂತ್ರಿಗಳು ಕೂಡಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂಸದೆಯ ಅಭಿಮಾನಿಗಳು ಸ್ವಲ್ಪ ಸಮಯದಲ್ಲೇ ಇದನ್ನು 3000ಕ್ಕೂ ಹೆಚ್ಚು ಲೈಕ್ ಮಾಡಿ, 2200ಕ್ಕೂ ಹೆಚ್ಚು ಬಾರಿ ರಿಟ್ವೀಟ್ ಮಾಡಿದರಲ್ಲದೇ, ಯಡಿಯೂರಪ್ಪ, ಅರವಿಂದ ಲಿಂಬಾವಳಿ ಮತ್ತು ಪಿ.ಸಿ. ಮೋಹನ್ ಮುಂತಾದವರ ಗಮನಕ್ಕೂ ತಂದರು.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ನಡೆದ ಆತ್ಮಹತ್ಯೆಯ ಪ್ರಕರಣವನ್ನು ‘ಗೋರಕ್ಷಕನ ಕೊಲೆ’ ಎಂದು ಸಂಸದೆ ಹಬ್ಬಿಸುವ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆಯ ಪೊಲೀಸರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಅರುಣ್ ಬಸರಗಿ(31) ಮತ್ತು ಫಕೀರಪ್ಪ ತಳವಾರ(28) ಎಂಬ ಇಬ್ಬರು ಲಫಂಗರನ್ನು ಅರೆಸ್ಟ್ ಮಾಡಿದ್ದರು. ಸುದ್ದಿ ಗೊತ್ತಾದ ಮೇಲೂ ಶೋಭಾ ಕರಂದ್ಲಾಜೆ ಟ್ವೀಟ್ ಡಿಲೀಟ್ ಮಾಡಲಿಲ್ಲ.

ಇದಿಷ್ಟೂ ನಿನ್ನೆ ರವಿವಾರ ನಡೆದಿದ್ದು. ಬೆಳಗಾವಿಯ ಎsಸ್‍ಪಿ ಖುದ್ದು ಹೇಳಿಕೆ ನೀಡಿ, ಇದು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು ಸಿಆರ್‍ಪಿಸಿ ಕಲಂ 174ರ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವ ವೇಳೆ ಸುಳ್ ಸುದ್ದಿ ಹಬ್ಬಿಸಿದ್ದ ಇಬ್ಬರನ್ನು ಪತ್ತೆ ಮಾಡಿ ಜೈಲಿಗೆ ಹಾಕಿದ್ದೇವೆ’ ಎಂದು ಹೇಳಿಕೆ ನೀಡಿದ ನಂತರವೂ ಜವಾಬ್ದಾರಿ ಸ್ಥಾನದಲ್ಲಿರುವ ಸಂಸದೆ ಶೋಭಾ ಆ ಹುಡುಗರು ಹರಡಿದ ಸುಳ್ಳನ್ನೇ ಇನ್ನಷ್ಟು ಹಬ್ಬಿಸಿ ಸಮಾಹದ ಶಾಂತಿ ಕದಡಲು ಯತ್ನಿಸಿದ್ದಾರೆ.

ಕೂಡಲೇ ಪೊಲೀಸರು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅರಣ್ ಬಸರಗಿ ಮತ್ತು ಫಲೀರಪ್ಪ ತಳವಾರ ಮೇಲೆ ಹೂಡಲಾದ ಸಿಆರ್‍ಪಿಸಿ 153 ಎ ಕಲಂ ಅನ್ನು ಶೋಭಾ ಕರಂದ್ಲಾಜೆಯ ನೇಲೂ ಹೂಡಬೇಕು. ಹಾಗಾದಾಗ ಮಾತ್ರ ಇಂತಹ ಸಮಾಜ ಒಡೆಯುವ ಕೆಲಸ ನಿಲ್ಲಿಸಬಹುದು.

ರವಿವಾರ ಶಿವು ಉಪ್ಪಾರ (19) ಎನ್ನುವ ಯುವಕನ ಶವ ಬಾಗೇವಾಡಿ ಬಸ್ ನಿಲ್ದಾಣದ ಸಮೀಪ ನೇಣು ಹಾಕಿದ ಸ್ಥಿಯಲ್ಲಿತ್ತು. ಆತನ ತಂದೆಯ ದೂರು ಆಧರಿಸಿ ಗೋಕಾಕ್ ಪೊಲೀಸರು ಆತ್ಮಹತ್ಯೆ ಅಥವಾ ಅಸಹಜ ಸಾವು ಎಂದು 174 ಕಲಂ ಅಡಿ ತನಿಖೆ ಶುರು ಮಾಡಿದ್ದರು. ಆದರೆ ಮೇಲೆ ತಿಳಿಸಿದ ಇಬ್ಬರು ಫೇಸ್‍ಬುಕ್ ಪುಂಡರು, ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆಯಲು ಯತ್ನಿಸಿದಾಗ ಶಿವು ಅವರನ್ನು ಥಳಿಸಿ ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದೆಲ್ಲ ಸುಳ್ಳು ಸುದ್ದಿ ಹರಡಿದ್ದರು.

ಗೋಕಾಕಿನ ಶಾಸಕ ರಮೇಶ ಜಾರಕಿಹೊಳಿಗಂತೂ ಇದರ ಅರಿವು ಇರುವುದೇ ಡೌಟು. ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಶೋಭಾ ಕರಂದ್ಲಾಜೆ ವಿರುದ್ದಧ ಕೇಸು ದಾಖಲಾಗುವಂತೆ ಮಾಡಬೇಕಿದೆ. ಇಲ್ಲವಾದರೆ, ಸಮಾಜ ಒಡೆಯುವ ಶಕ್ತಿಗಳ ಅಟ್ಟಹಾಸ ಇನ್ನಷ್ಟು ಜೋರಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...