HomeUncategorized‘Black Lives Matters' ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದಾರೆ. ಕ್ರೀಡಾಂಗಣದ ಹೊರಗೆ ಭಾರತದ ಆಟಗಾರರು ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ ಎಂದಾಗ ಕ್ರೀಡಾಂಗಣದ ಒಳಗಿದ್ದ ರೋಹಿತ್ ಶರ್ಮ ಹಾಗೂ ಕೆ.ಎಲ್‌.ರಾಹುಲ್‌‌ ಮಂಡಿಯೂರಿದರು. ಪಾಕ್‌ ಆಟಗಾರರು ಎದೆಯ ಮೇಲೆ ಕೈಯಿಟ್ಟು ಗೌರವ ಸೂಚಿಸಿದರು.

ಪಂದ್ಯದ ನಂತರ ಈ ಕುರಿತು ಪ್ರತಿಕ್ರಿಯಿಸಿದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, “Black Lives Matters ಚಳಿವಳಿಗೆ ಬೆಂಬಲ ಸೂಚಿಸುವ ಈ ನಿರ್ಧಾರವು ನಮ್ಮ ಮ್ಯಾನೇಜ್‌ಮೆಂಟ್ ಕಡೆಯಿಂದ ಬಂದಿತ್ತು. ಅದಕ್ಕೆ ನಾವು ಒಪ್ಪಿದ ನಂತರ ಪಾಕ್ ತಂಡ ಸಹ ಬೆಂಬಲಿಸುವುದಾಗಿ ತಿಳಿಸಿತು. ಈ ರೀತಿಯಾಗಿ ಗೌರವ ಸಲ್ಲಿಸಿದೆವು” ಎಂದಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲಿ ಆಫ್ರಿಕನ್‌-ಅಮೆರಿಕನ್‌ ಪ್ರಜೆ, ಕಪ್ಪು ವರ್ಣೀಯ ಜಾರ್ಜ್ ಪ್ಲಾಯ್ಡ್‌ ಅವರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಡೆರೇಕ್‌ ಚೌವಿನ್‌ ಜನಾಂಗೀಯ ನಿಂದನೆ ಮಾಡಿ ಕೊಲೆ ಮಾಡಿದ್ದರು. ಮಂಡಿಯಿಂದ ಪ್ಲಾಯ್ಡ್ ಅವರ ಕತ್ತು ಹಿಸುಕಿ ಕೊಂದ ವಿಡಿಯೋ ವೈರಲ್ ಆಗಿತ್ತು. ಆಗ ಇಡೀ ವಿಶ್ವವೇ ಕಪ್ಪು ವರ್ಣಿಯರ ಪರ ನಿಂತು, ಆ ಕೊಲೆಯನ್ನು ಖಂಡಿಸಿತ್ತು. ಅಲ್ಲಿಂದ ಪಶ್ಚಾತಾಪದ ರೀತಿಯಲ್ಲಿ ಮಂಡಿಯೂರಿ ಕ್ಷಮೆ ಕೋರುವ, ಕಪ್ಪು ಜನರ ಪರ ನಿಲ್ಲುವ ಪದ್ಧತಿ ಜಾಲ್ತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡವು ಮಂಡಿಯೂರಿದ್ದು, ಪ್ರಪಂಚದ ಗಮನ ಸೆಳೆದಿದೆ. ಬಹಳಷ್ಟು ಜನ ಈ ಪ್ರಯತ್ನವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆದರೆ ಬೆಂಬಲದ ಜೊತೆಗೆ ಭಾರತದ ತಂಡದ ಈ ಕ್ರಮಕ್ಕೆ ಟೀಕೆ ಸಹ ಕೇಳಿಬಂದಿದೆ. ಬೇರೆ ದೇಶದಲ್ಲಿನ ಜನಾಂಗೀಯ ತಾರತಮ್ಯವನ್ನು ಖಂಡಿಸುವ ಭಾರತೀಯ ಕ್ರಿಕೆಟ್ ತಂಡ ತಮ್ಮದೇ ದೇಶದಲ್ಲಿ ಇಂದು ದಲಿತರ ಮೇಲೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ತಾರತಮ್ಯಕ್ಕೆ ಕುರುಡಾಗಿದೆ. ಇದು ಅವರ ಹಿಪೋಕ್ರಸಿಯ (ಆಷಾಢಭೂತಿತನ) ಭಾಗವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

“ಕಪ್ಪು ವರ್ಣಿಯರ ಮೇಲಿನ ಬಿಳಿ ವರ್ಣಿಯರ (ಜನಾಂಗೀಯ) ದಾಳಿಯನ್ನು ಖಂಡಿಸಿ, ಜಗತ್ತಿನಾದ್ಯಂತ ನಡೆಯುತ್ತಿರುವ #BlackLivesMatter ಚಳವಳಿಗೆ ನಿನ್ನೆ ಭಾರತ ತಂಡ ಮಂಡಿಯೂರಿ ಬೆಂಬಲ ಸೂಚಿಸಿದ್ದು ತುಂಬಾ ಮೆಚ್ಚುವ ನಡೆಯಾಗಿದೆ. ಇದೇ ರೀತಿ ಭಾರತದಲ್ಲಿ ಜಾತಿಯ ಕಾರಣಕ್ಕಾಗಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆಗಳನ್ನು ಖಂಡಿಸಿ ದೇಶದಾದ್ಯಂತ ನಡೆಯುವ #DalitLivesMatter ಚಳವಳಿಯನ್ನು ಬೆಂಬಲಿಸಬೇಕೆಂದು ನಮ್ಮ ಭಾರತ ತಂಡವನ್ನು ವಿನಂತಿಸಿಕೊಳ್ಳುತ್ತೇನೆ” ಎಂದು ದಲಿತ ಲೇಖಕ ಪ್ರಜ್ವಲ್ ಶಶಿ ತಗಡೂರು ಅವರು ಎಫ್‌ಬಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮಲ್ಲಿಯೇ ದಲಿತರ ಮೇಲೆ, ಮುಸ್ಲಿಮರ ಮೇಲೆ, ಕೆಳಜಾತಿಯ ಹೆಂಗಸರ ಮೇಲೆ, ಮುಗ್ಧ ದಲಿತ ಪುಟ್ಟ ಹೆಣ್ಮಕ್ಕಳ ಮೇಲೆ ಆ ಪಾಟಿ ಅತ್ಯಾಚಾರ, ಕ್ರೌರ್ಯ, ಚಿತ್ರಹಿಂಸೆ, ಅವಮಾನ, ಮಾಬ್ ಲಿಂಚಿಂಗ್ ನಡೆಯುತ್ತಲೇ ಇರುವಾಗ ಇವರು ಎಲ್ಲಿ ಹೋಗಿದ್ದರು? ಆಗ ಇವರ ಮಂಡಿಗೆ ಏನಾಗಿರುತ್ತದೆ? ನಿಮ್ಮಂತ ಡಬಲ್ ಸ್ಟಾಂಡರ್ಡ್ ಸ್ವಾರ್ಥಿಗಳ ಸಪೋರ್ಟ್ ಕಪ್ಪು ಜನರಿಗೆ ಖಂಡಿತಾ ಬೇಡ…!” ಎಂದು ಆ ಶ್ರೀ ಕ ಪೋಸ್ಟ್‌ ಮಾಡಿದ್ದಾರೆ.

ಇದು ಹಿಪೋಕ್ರಸಿಯ ಪರಮಾವಧಿ ಎಂದು ನೆಟ್ಟಿಗರು ಟೀಕಿಸಿ‌ದ್ದಾರೆ. ಕವಯತ್ರಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ, “ಇದು ಭಾರತದ ಕ್ರಿಕೆಟರ್‌ಗಳ ಹಿಪೋಕ್ರಸಿ. ಇವರು ಒಮ್ಮೆಯೂ #ದಲಿತ್‌ ಲೈವ್ಸ್‌ ಮ್ಯಾಟರ್ಸ್, #ಮುಸ್ಲಿಂಲಿವ್ಸ್‌ಮ್ಯಾಟರ್ಸ್, #ಫಾರ್‍ಮರ್ಸ್‌‌ಲಿವ್ಸ್‌‌ಮ್ಯಾಟರ್ಸ್ ಎನ್ನಲಿಲ್ಲ” ಎಂದು ಆಕ್ಷೇಪ ಎತ್ತಿದ್ದಾರೆ.

“ಲಿಂಚಿಂಗ್‌ ನಡೆದಾಗ ನೀವು ಪ್ರತಿಕ್ರಿಯಿಸಲಿಲ್ಲ. ಹತ್ಯಾಕಾಂಡದ ಸಮಯದಲ್ಲಿ ನೀವು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ರೈತರನ್ನು ಕೊಂದಾಗ ಮಾತನಾಡಲಿಲ್ಲ, ಬೆಲೆ ಏರಿಕೆಯನ್ನು ಅಸಹಜವಾಗಿ ಏರಿಕೆ ಮಾಡಿದಾಗ ನೀವು ಮಾತನಾಡಲಿಲ್ಲ. ಈಗ ನಿಮಗೆ ಬ್ಲಾಕ್‌ಲಿವ್ಸ್‌ಮ್ಯಾಟರ್ಸ್ ಬೇಕೆ?” ಎಂದು ಸಂಗಮೇಶ್‌ ಎಂಬವರು ಪ್ರಶ್ನಿಸಿದ್ದಾರೆ.


 ಇದನ್ನೂ ಓದಿರಿ: ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...