Homeಸಿನಿಮಾಕ್ರೀಡೆವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

2019ರ ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ಥಾನ ವಿರುದ್ಧ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟ ಶಮಿ ಭಾರತದ ಹೆಮ್ಮೆ ಎಂದು ಕೊಂಡಾಡಲಾಗಿದೆ.

- Advertisement -
- Advertisement -

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದು ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡ ನಿಂತಿರುವುದರ ದ್ಯೋತಕವಾಗಿದೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಇಂದು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...