Homeಚಳವಳಿಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ....

ಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಗೊಳಗಾಗಿದ್ದ ದಲಿತ ಯುವಕ ಅರುಣ್ ಕುಮಾರ್‌ ವಾಲ್ಮೀಕಿ ಅವರ ಮನೆಗೆ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್ ಸೋಮವಾರ ಭೇಟಿ ನೀಡಿದ್ದರು.

ಮೃತ ಅರುಣ್ ಕುಮಾರ್‌ ವಾಲ್ಮೀಕಿ ಅವರ ಕುಟುಂಬವನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್ ಮೃತನ ಕುಟುಂಬಸ್ಥರಿಗೆ 40 ಲಕ್ಷ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಪರಿಹಾರ ನೀಡುವಾಗ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ, ಲಖಿಂಪುರ ಖೇರಿ ಮತ್ತು ಕಾನ್ಪುರದಲ್ಲಿ ಸಂತ್ರಸ್ತರಿಗೆ 40 ರಿಂದ 45 ಲಕ್ಷ ಪರಿಹಾರ ನೀಡಿದರೆ, ಆಗ್ರಾದಲ್ಲಿ ಕೇವಲ 10 ಲಕ್ಷ ರೂಪಾಯಿ ಪರಿಹಾರ ನೀಡಿದೆ” ಎಂದು ಆರೋಪಿಸಿದ್ದಾರೆ.

‘ರಾಜ್ಯ ಸರ್ಕಾರ ಅರುಣ್ ಕುಟುಂಬಕ್ಕೂ 40 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಸರ್ಕಾರ ತಾರತಮ್ಯ ಮಾಡಬಾರದು. ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು. ಜೊತೆಗೆ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆಗ್ರಾದ ಜಗದೀಶ್ ಪುರ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಆರೋಪದ ಮೇಲೆ ಠಾಣೆಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್‌ ವಾಲ್ಮೀಕಿ (30) ಎಂಬುವವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 19 ರಂದು ವಿಚಾರಣೆಯ ವೇಳೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಆಸ್ಪತ್ರೆಗೆ ತೆರಳುವಷ್ಟರಲ್ಲೇ ಸಾವನ್ನಪ್ಪಿದ್ದರು. ಪೊಲೀಸರ ಥಳಿತದಿಂದಲೇ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.

ಈ ವೇಳೆ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸದ ಬಗ್ಗೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ನಾನು ರೈತರಲ್ಲಿ ಮನವಿ ಮಾಡುತ್ತೇನೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಬಿಜೆಪಿಯನ್ನು ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೂ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...