Homeಚಳವಳಿಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ....

ಲಾಕಪ್ ಡೆತ್‌ ಸಂತ್ರಸ್ತರ ಮನೆಗೆ ರಾಕೇಶ್ ಟಿಕಾಯತ್ ಭೇಟಿ: ಸರ್ಕಾರಿ ಕೆಲಸ, 40 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಗೊಳಗಾಗಿದ್ದ ದಲಿತ ಯುವಕ ಅರುಣ್ ಕುಮಾರ್‌ ವಾಲ್ಮೀಕಿ ಅವರ ಮನೆಗೆ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ನಾಯಕ ರಾಕೇಶ್ ಟಿಕಾಯತ್ ಸೋಮವಾರ ಭೇಟಿ ನೀಡಿದ್ದರು.

ಮೃತ ಅರುಣ್ ಕುಮಾರ್‌ ವಾಲ್ಮೀಕಿ ಅವರ ಕುಟುಂಬವನ್ನು ಭೇಟಿ ಮಾಡಿದ ರಾಕೇಶ್ ಟಿಕಾಯತ್ ಮೃತನ ಕುಟುಂಬಸ್ಥರಿಗೆ 40 ಲಕ್ಷ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಪರಿಹಾರ ನೀಡುವಾಗ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ, ಲಖಿಂಪುರ ಖೇರಿ ಮತ್ತು ಕಾನ್ಪುರದಲ್ಲಿ ಸಂತ್ರಸ್ತರಿಗೆ 40 ರಿಂದ 45 ಲಕ್ಷ ಪರಿಹಾರ ನೀಡಿದರೆ, ಆಗ್ರಾದಲ್ಲಿ ಕೇವಲ 10 ಲಕ್ಷ ರೂಪಾಯಿ ಪರಿಹಾರ ನೀಡಿದೆ” ಎಂದು ಆರೋಪಿಸಿದ್ದಾರೆ.

‘ರಾಜ್ಯ ಸರ್ಕಾರ ಅರುಣ್ ಕುಟುಂಬಕ್ಕೂ 40 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಸರ್ಕಾರ ತಾರತಮ್ಯ ಮಾಡಬಾರದು. ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು. ಜೊತೆಗೆ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಆಗ್ರಾದ ಜಗದೀಶ್ ಪುರ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಆರೋಪದ ಮೇಲೆ ಠಾಣೆಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿ ಕೆಲಸ ಮಾಡಿದ್ದ ಅರುಣ್ ಕುಮಾರ್‌ ವಾಲ್ಮೀಕಿ (30) ಎಂಬುವವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 19 ರಂದು ವಿಚಾರಣೆಯ ವೇಳೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಆಸ್ಪತ್ರೆಗೆ ತೆರಳುವಷ್ಟರಲ್ಲೇ ಸಾವನ್ನಪ್ಪಿದ್ದರು. ಪೊಲೀಸರ ಥಳಿತದಿಂದಲೇ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.

ಈ ವೇಳೆ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸದ ಬಗ್ಗೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ನಾನು ರೈತರಲ್ಲಿ ಮನವಿ ಮಾಡುತ್ತೇನೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಬಿಜೆಪಿಯನ್ನು ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

“ನಾವು ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ಯಾವುದೇ ರಾಜಕೀಯ ಪಕ್ಷಕ್ಕೂ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಸ್ಪಷ್ಟನೆ ನೀಡಿದ್ದಾರೆ.


ಇದನ್ನೂ ಓದಿ: ದಲಿತ ಯುವಕನ ಲಾಕಪ್ ಡೆತ್: ಐವರು ಪೊಲೀಸರ ಅಮಾನತು, ಅಪರಿಚಿತರ ವಿರುದ್ಧ ಕೊಲೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...