Homeಕರ್ನಾಟಕ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ಬಿಜೆಪಿ ನಾಯಕರ ಹಳೆಯ ಹೇಳಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಿ ಬಿಜೆಪಿಗೆ ತಿರುಗೇಟು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದಿರುವ ಕರ್ನಾಟಕ ಬಿಜೆಪಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೇಗೆ ಜಾತಿಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಹಾಗೂ ಸಚಿವ ಆರ್‌.ಅಶೋಕ್ ಅವರು ಈ ಹಿಂದೆ ನೀಡಿದ್ದ ಹೇಳಿಕೆಗಳ ಸ್ಕ್ರೀನ್‌ಶಾಟ್‌ ಹಾಕಿ, ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಪ್ರಶ್ನಿಸಿದ್ದಾರೆ.

“ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದೋಯ್ದಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬಿಜೆಪಿಯವರ ಬಣ್ಣದ ಮಾತುಗಳಿಗೆ ಮರುಳಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿಯ ಉಪಚುನಾವಣೆಯಲ್ಲಿ ಮತ ನೀಡಿ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದನ್ನು ಪ್ರಶ್ನಿಸಿದ್ದ ಕರ್ನಾಟಕ ಬಿಜೆಪಿಯು ಸರಣಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಅವರನ್ನು ಕೆಣಕಿತ್ತು. “ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ” ಎಂದು ಕೇಳಿತ್ತು.

“ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ. ನಿಜವಾಗಿಯೂ ಜಾತ್ಯತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ” ಎಂದು #ಜಾತಿವಿಭಜಕಸಿದ್ದರಾಮಯ್ಯ ಹ್ಯಾಷ್‌ ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ನಾನು ಜಾತಿವಾದಿ.. ಏನೀಗ?: ಬಿಜೆಪಿ ಟ್ವೀಟ್‌ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಹೇಗೆ ಜಾತಿ ರಾಜಕೀಯವನ್ನು ಮಾಡುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ? ಎಂದು ಕೇಳಿದ್ದಾರೆ.

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ. ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆ ಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

“ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್‌ಎಸ್‌ಎಸ್‌ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ?” ಎಂದು ಕೇಳಿರುವ ಸಿದ್ದರಾಮಯ್ಯ ಅವರು #ಬಿಜೆಪಿಜಾತಿಹಿಪಾಕ್ರಸಿ  ಹ್ಯಾಷ್‌ಟ್ಯಾಗ್ ಹಾಕಿದ್ದಾರೆ.


ಇದನ್ನೂ ಓದಿರಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...