Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...