Homeಮುಖಪುಟಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಅಲ್ಲಿನ ಆಡಳಿತ ಪಕ್ಷ ಸಜ್ಜಾಗತೊಡಗಿದೆ. ರಾಜ್ಯದಲ್ಲಿ ಮತ್ತೇ ಅಧಿಕಾರ ಹಿಡಿಯಲು ಬಿಜೆಪಿ ಹರಸಹಾಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಪೂರ್ವಾಂಚಲ ಪ್ರದೇಶವನ್ನು ಪಕ್ಷವು ಗುರಿಯಾಗಿಸಿದೆ. ಹೀಗಾಗಿಯೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಒಂಬತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐದು ಪೂರ್ವಾಂಚಲ ಪ್ರದೇಶದಲ್ಲಿದೆ ಎಂಬುವುದು ವಿಶೇಷವಾಗಿದೆ.

ಪ್ರಮುಖ ಕಲ್ಯಾಣ ಯೋಜನೆಗಳನ್ನು ಉದ್ಘಾಟಿಸಲು ಪೂರ್ವಾಂಚಲ ಪ್ರದೇಶದಲ್ಲಿರುವ ಸಿದ್ಧಾರ್ಥನಗರ ಮತ್ತು ವಾರಣಾಸಿಯನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಈ ಪ್ರದೇಶದ ಜನರಿಗೆ ಸೂಕ್ಷ್ಮ ರಾಜಕೀಯ ಸಂದೇಶವನ್ನು ನೀಡಿದ್ದಾರೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

“ಲಕ್ನೋಗೆ ಹೋಗುವ ಹೆದ್ದಾರಿಯು ಪೂರ್ವಾಂಚಲ ಮೂಲಕ ಹಾದು ಹೋಗುತ್ತದೆ” ಎಂಬುದು ಉತ್ತರ ಪ್ರದೇಶದ ಜನಪ್ರಿಯ ರಾಜಕೀಯ ಮಾತಾಗಿದೆ. ಜೊತೆಗೆ ಪೂರ್ವ ಯುಪಿಯಲ್ಲಿ ಮೋದಿ ಮತ್ತು ಆದಿತ್ಯನಾಥ್‌ ಅವರ ಕ್ಷೇತ್ರಗಳು ಕೂಡಾ ಇರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಪ್ರಶ್ನೆ ಕೂಡಾ ಆಗಿದೆ.

ಪೂರ್ವಾಂಚಲ ಪ್ರದೇಶದ 28 ಜಿಲ್ಲೆಗಳಲ್ಲಿ 164 ವಿಧಾನಸಭಾ ಕ್ಷೇತ್ರಗಳು ಹರಡಿಕೊಂಡಿವೆ. ಇದು ಉತ್ತರಪ್ರದೇಶದ 403 ವಿಧಾಸಭಾ ಸದಸ್ಯರ ಪೈಕಿ ಸುಮಾರು 33% ದಷ್ಟು ಸ್ಥಾನಗಳನ್ನು ನೀಡುತ್ತದೆ.

2017 ರ ಚುನಾವಣೆಯಲ್ಲಿ, ಬಿಜೆಪಿಯು ಇಲ್ಲಿನ 164 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಸಮಾಜವಾದಿ ಪಕ್ಷವು 17, ಬಿಎಸ್ಪಿ 14, ಕಾಂಗ್ರೆಸ್ 2 ಮತ್ತು ಇತರರು 16 ಸ್ಥಾನಗಳನ್ನು ಪಡೆದಿದ್ದರು. ಇದರ ನಂತರ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಪೂರ್ವಾಂಚಲದಿಂದ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ

“ಲಖಿಂಪುರ ಖೇರಿ ಹಿಂಸಾಚಾರ ಮತ್ತು ಪಶ್ಚಿಮ ಯುಪಿಯಲ್ಲಿ ರೈತರ ಅಶಾಂತಿಯ ಹಿನ್ನೆಲೆಯಲ್ಲಿ, ಬಿಜೆಪಿಯು ಈಗ ಪೂರ್ವಾಂಚಲ್ ಮೇಲೆ ತನ್ನ ದೃಷ್ಟಿಯನ್ನು ಕೇಂದ್ರೀಕರಿಸಿದೆ. ಅಲ್ಲಿ ಗೆಲ್ಲುವ ಮೂಲಕ ಪಶ್ಚಿಮ ಯುಪಿಯ ಸಂಭವನೀಯ ನಷ್ಟವನ್ನು ತುಂಬಲು ಪ್ರಯತ್ನಿಸುತ್ತಿದೆ” ಎಂದು ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಹೇಳಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ ಮತ್ತು ಸಂಜಯ್ ನಿಶಾದ್ ಅವರ ನಿಶಾದ್ ಪಾರ್ಟಿಯಂತಹ ಸಣ್ಣ ಜಾತಿ ಆಧಾರಿತ ಗುಂಪುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪೂರ್ವ ಯುಪಿಯಲ್ಲಿ ಬಿಜೆಪಿಯು ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಈಗಾಗಲೇ ಪ್ರಯತ್ನಿಸುತ್ತಿದೆ.

ಪ್ರಧಾನಿ ಮೋದಿ ಕೂಡಾ ಐದು ದಿನಗಳ ಅವಧಿಯಲ್ಲಿ ಎರೆಡೆರೆಡು ಬಾರಿ ಪೂರ್ವಾಂಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಇದರಿಂದಲೇ ಉತ್ತರಪ್ರದೇಶದ ಚುನಾವಣೆಯಲ್ಲಿ ಪೂರ್ವಾಂಚಲದ ಪ್ರಾಮುಖ್ಯತೆಯನ್ನು ಅಳೆಯಬಹುದು. ಪ್ರಧಾನಿ ಅಕ್ಟೋಬರ್ 20 ರಂದು, ಯುಪಿಯ ಮೂರನೇ ಮತ್ತು ದೇಶದ 87 ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಕುಶಿನಗರಕ್ಕೆ ತೆರಳಿದ್ದರು.

ಇದನ್ನೂ ಓದಿ: ಯೋಗೇಂದ್ರ ಯಾದವ್ ಅಮಾನತು: ಚಾರಿತ್ರಿಕ ರೈತ ಹೋರಾಟದ ವಿಶಿಷ್ಟ ಪ್ರಜಾತಂತ್ರ

ಇಷ್ಟೇ ಅಲ್ಲದೆ, ಅವರು ವಾರಣಾಸಿಯ ಜನರಿಗೆ 5,229 ಕೋಟಿ ರೂಪಾಯಿಗಳ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದರು. ಈ ಎಲ್ಲಾ ಪ್ರವಾಸಗಳು ಪೂರ್ವ ಯುಪಿಯನ್ನು ಕೇಂದ್ರೀಕರಿಸಿದ್ದು, ಇದು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಮಾಡಲಾಗುತ್ತಿದೆ.

ಮುಂಬರುವ ವೈದ್ಯಕೀಯ ಮೂಲಸೌಕರ್ಯವು ಆರೋಗ್ಯಕರ ಭಾರತದ ಕನಸುಗಳನ್ನು ನನಸಾಗಿಸುತ್ತದೆ ಎಂದು ಪ್ರಧಾನಿ ಸಿದ್ಧಾರ್ಥನಗರದಲ್ಲಿ ಹೇಳಿಕೊಂಡಿದ್ದರು. “ವೈದ್ಯಕೀಯ ಕಾಲೇಜುಗಳು ರಾಜ್ಯದ ಜನರಿಗೆ ಉಡುಗೊರೆಯಾಗಿವೆ” ಎಂದು ಹೇಳಿದ್ದ ಅವರು, ಒಂಬತ್ತು ಕಾಲೇಜುಗಳು 5,000 ಉದ್ಯೋಗಾವಕಾಶಗಳನ್ನು ಮತ್ತು ಸುಮಾರು 2,500 ಆಸ್ಪತ್ರೆ ಹಾಸಿಗೆಗಳನ್ನು ಸೃಷ್ಟಿಸುತ್ತವೆ ಎಂದು ಅವರು ತಿಳಿಸಿದ್ದರು.

ವಾರಣಾಸಿಯಲ್ಲಿ ಮಾತನಾಡಿದ್ದ ಪ್ರಧಾನಿ, ದೇಶದಲ್ಲಿ ಸಮರ್ಪಕ ಮತ್ತು ಗುಣಮಟ್ಟದ ವೈದ್ಯಕೀಯ ಮೂಲಸೌಕರ್ಯಗಳು ಇಲ್ಲದೆ ಇರಲು ಪ್ರಮುಖ ಕಾರಣ ಹಿಂದಿನ ಸರ್ಕಾರಗಳು ಎಂದು ಆರೋಪಿಸಿದ್ದರು.

ಒಟ್ಟಿನಲ್ಲಿ, ಬಿಜೆಪಿ ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಕೊಳ್ಳಲು ಹರಸಾಹಸ ಪಡುತ್ತಿದೆ. ಕೊರೊನಾ ನಿರ್ವಣೆಯಲ್ಲಿ ವಿಫಲತೆ ಮತ್ತು ವೈದ್ಯಕೀಯ ಸೌಲಭ್ಯ ಕೊರತೆಯ ಆರೋಪವನ್ನು ಈ ಹಿಂದಿನ ಸರ್ಕಾರದ ಮೇಲೆ ಹಾಕುತ್ತಲೆ ಇವೆ. ಇದರ ಜೊತೆಗೆ ರೈತ ಹೋರಾಟದಿಂದ ತನಗೆ ಯಾವುದೆ ನಷ್ಟವಿಲ್ಲ ಎಂದು ಬಿಜೆಪಿ ಬಿಂಬಿಸುತ್ತಿದ್ದರೂ ಅದರ ಬಗ್ಗೆ ಕೂಡಾ ತೀವ್ರವಾಗಿ ಯೋಚಿಸುತ್ತಿದೆ. ಈ ಹಿನ್ನಲೆಯಲ್ಲೇ ಪಶ್ಚಿಮ ಯುಪಿಯನ್ನು ಬಿಟ್ಟು ತನ್ನ ಹೆಚ್ಚಿನ ಗಮನವನ್ನು ಪೂರ್ವ ಯುಪಿಯ ಕಡೆಗೆ ಹೊರಳಿಸಿದೆ.

ಮೂಲ: TNIE

ಇದನ್ನೂ ಓದಿ: ಆಶ್ರಮ್‌-3 ಚಿತ್ರೀಕರಣದ ವೇಳೆ ಬಜರಂಗದಳ ದಾಳಿ: ಮಧ್ಯಪ್ರದೇಶ ಗೃಹಸಚಿವ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...