Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

'ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ' ಎಂದು ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ 'ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಭಾರತ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ ದನಿಗೂಡಿಸಿದ್ದಾರೆ.

“ಮೊಹಮ್ಮದ್ ಶಮಿ ನಾವೆಲ್ಲರೂ ನಿನ್ನ ಜೊತೆಗಿದ್ದೇವೆ. ಈ ಜನರ ಮನಸ್ಸು ದ್ವೇಷದಿಂದ ತುಂಬಿಹೋಗಿದೆ, ಏಕೆಂದರೆ ಅವರಿಗೆ ಪ್ರೀತಿ ನೀಡುವವರೇ ಇಲ್ಲ. ಅವರನ್ನು ಕ್ಷಮಿಸಿಬಿಡು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “ನಾವು ಭಾರತ ತಂಡವನ್ನು ಬೆಂಬಲಿಸಿದಾಗ, ತಂಡವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಮೊಹಮ್ಮದ್ ಶಮಿ ಬದ್ಧತೆಯ, ವಿಶ್ವ ದರ್ಜೆಯ ಬೌಲರ್. ಇತರ ಕ್ರೀಡಾಪಟುಗಳಂತೆ ಆ ದಿನ ಅವರದಾಗಿರಲಿಲ್ಲ. ನಾನು ಶಮಿ ಮತ್ತು ಟೀಮ್ ಇಂಡಿಯಾದ ಹಿಂದೆ ನಿಂತಿದ್ದೇನೆ” ಎಂದಿದ್ದಾರೆ.

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. 11 ಜನರ ತಂಡದಲ್ಲಿ ಶಮಿ ಒಬ್ಬರೆ ಮುಸ್ಲಿಂ ಆಗಿದ್ದರು. ಪಾಕಿಸ್ತಾನಕ್ಕೆ ಹೋಗು, ದೇಶದ್ರೋಹಿ ಎಂದು ಕೆಟ್ಟದಾಗಿ ದಾಳಿ ಮಾಡಿದ್ದರು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...