Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

'ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ' ಎಂದು ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ 'ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಭಾರತ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ ದನಿಗೂಡಿಸಿದ್ದಾರೆ.

“ಮೊಹಮ್ಮದ್ ಶಮಿ ನಾವೆಲ್ಲರೂ ನಿನ್ನ ಜೊತೆಗಿದ್ದೇವೆ. ಈ ಜನರ ಮನಸ್ಸು ದ್ವೇಷದಿಂದ ತುಂಬಿಹೋಗಿದೆ, ಏಕೆಂದರೆ ಅವರಿಗೆ ಪ್ರೀತಿ ನೀಡುವವರೇ ಇಲ್ಲ. ಅವರನ್ನು ಕ್ಷಮಿಸಿಬಿಡು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “ನಾವು ಭಾರತ ತಂಡವನ್ನು ಬೆಂಬಲಿಸಿದಾಗ, ತಂಡವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಮೊಹಮ್ಮದ್ ಶಮಿ ಬದ್ಧತೆಯ, ವಿಶ್ವ ದರ್ಜೆಯ ಬೌಲರ್. ಇತರ ಕ್ರೀಡಾಪಟುಗಳಂತೆ ಆ ದಿನ ಅವರದಾಗಿರಲಿಲ್ಲ. ನಾನು ಶಮಿ ಮತ್ತು ಟೀಮ್ ಇಂಡಿಯಾದ ಹಿಂದೆ ನಿಂತಿದ್ದೇನೆ” ಎಂದಿದ್ದಾರೆ.

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. 11 ಜನರ ತಂಡದಲ್ಲಿ ಶಮಿ ಒಬ್ಬರೆ ಮುಸ್ಲಿಂ ಆಗಿದ್ದರು. ಪಾಕಿಸ್ತಾನಕ್ಕೆ ಹೋಗು, ದೇಶದ್ರೋಹಿ ಎಂದು ಕೆಟ್ಟದಾಗಿ ದಾಳಿ ಮಾಡಿದ್ದರು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...