Homeಸಿನಿಮಾಕ್ರೀಡೆಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

'ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ' ಎಂದು ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ 'ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. 

- Advertisement -
- Advertisement -

ಭಾರತ ತಂಡವು ಪಾಕಿಸ್ತಾನ ಎದುರು ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಭಾರತ ತಂಡದ ಹಿರಿಯ ಆಟಗಾರ ಸಚಿನ್ ತೆಂಡೂಲ್ಕರ್ ದನಿಗೂಡಿಸಿದ್ದಾರೆ.

“ಮೊಹಮ್ಮದ್ ಶಮಿ ನಾವೆಲ್ಲರೂ ನಿನ್ನ ಜೊತೆಗಿದ್ದೇವೆ. ಈ ಜನರ ಮನಸ್ಸು ದ್ವೇಷದಿಂದ ತುಂಬಿಹೋಗಿದೆ, ಏಕೆಂದರೆ ಅವರಿಗೆ ಪ್ರೀತಿ ನೀಡುವವರೇ ಇಲ್ಲ. ಅವರನ್ನು ಕ್ಷಮಿಸಿಬಿಡು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “ನಾವು ಭಾರತ ತಂಡವನ್ನು ಬೆಂಬಲಿಸಿದಾಗ, ತಂಡವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಬೆಂಬಲಿಸುತ್ತೇವೆ. ಮೊಹಮ್ಮದ್ ಶಮಿ ಬದ್ಧತೆಯ, ವಿಶ್ವ ದರ್ಜೆಯ ಬೌಲರ್. ಇತರ ಕ್ರೀಡಾಪಟುಗಳಂತೆ ಆ ದಿನ ಅವರದಾಗಿರಲಿಲ್ಲ. ನಾನು ಶಮಿ ಮತ್ತು ಟೀಮ್ ಇಂಡಿಯಾದ ಹಿಂದೆ ನಿಂತಿದ್ದೇನೆ” ಎಂದಿದ್ದಾರೆ.

‘ಮೊಹಮ್ಮದ್ ಶಮಿ ಭಯ್ಯಾ, ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ’ ಎಂದು ಭಾರತದ ಖ್ಯಾತ ಬೌಲರ್ ಯಜುವೇಂದ್ರ ಚಹಲ್ ಟ್ವೀಟ್ ಮಾಡಿದರೆ ‘ನಾವು ನಿಮ್ಮನ್ನು ಪ್ರೀತಿಸುತ್ತೇವೆ ಶಮಿ’ ಎಂದು ಹಿರಿಯ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

“ಮೊಹಮ್ಮದ್ ಶಮಿ ಮೇಲಿನ ಆನ್‌ಲೈನ್ ದಾಳಿ ಆಘಾತಕಾರಿಯಾದುದ್ದು. ನಾವು ಶಮಿ ಪರವಾಗಿ ನಿಲ್ಲುತ್ತೇವೆ. ಅವರು ಚಾಂಪಿಯನ್ ಆಗಿದ್ದಾರೆ ಮತ್ತು ಭಾರತದ ಕ್ಯಾಪ್ ಧರಿಸುವ ಯಾರೇ ಆಗಲಿ ಅವರು ಈ ಆನ್‌ಲೈನ್ ದ್ವೇಷ ಕಾರುವವರಿಗಿಂತ ಹೆಚ್ಚಿನ ಮಟ್ಟದಲ್ಲಿ ಭಾರತವನ್ನು ತಮ್ಮ ಹೃದಯದಲ್ಲಿಟ್ಟುಕೊಂಡಿರುತ್ತಾರೆ. ನಿನ್ನೊಂದಿಗಿದ್ದೇನೆ ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ಪರಾಕ್ರಮ ತೋರಿಸಿ” ಎಂದು ಹಿರಿಯ ಆಟಗಾರ ವಿರೇಂದ್ರ ಸೆಹ್ವಾಗ್ ಬರೆದಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಹೆಮ್ಮೆ ಎಂದು ಅಮನ್ ಶರ್ಮಾರವರು 2019ರ ವಿಶ್ವಕಪ್ ಪಂದ್ಯದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಭಾರತ – ಆಫ್ಘಾನಿಸ್ಥಾನ ನಡುವೆ ನಡೆದ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಗೆಲ್ಲಲು ಆಫ್ಘಾನಿಸ್ಥಾನ 16 ರನ್ ಗಳಿಸಬೇಕಿತ್ತು. ಆಗ ಬೌಲ್ ಮಾಡಿದ ಶಮಿ ಕೇವಲ ನಾಲ್ಕು ರನ್ ನೀಡಿ ಸತತ ಮೂರು ವಿಕೆಟ್ (ಹ್ಯಾಟ್ರಿಕ್) ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಆಗ ಇಡೀ ದೇಶವೇ ಶಮಿಯವರನ್ನು ಕೊಂಡಾಡಿತ್ತು. ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ.

ಭಾನುವಾರದ ಪಂದ್ಯದಲ್ಲಿ ಭಾರತ ಪಾಕ್ ಎದುರು 10 ವಿಕೆಟ್‌ಗಳ ಸೋಲೊಪ್ಪಿಕೊಂಡಿತ್ತು. ವಿರಾಟ್ ಕೊಹ್ಲಿ ಇಡೀ ತಂಡ ಚೆನ್ನಾಗಿ ಆಡಲಿಲ್ಲಿ ಎಂದು ವಿಮರ್ಶಿಸಿಕೊಂಡಿದ್ದರು. ಆದರೂ ಬಹಳಷ್ಟು ದುಷ್ಕರ್ಮಿಗಳು ಇನ್ಸ್ಟಾಗ್ರಾಮ್ ನಲ್ಲಿ ಮೊಹಮ್ಮದ್ ಶಮಿಯನ್ನು ಟ್ರೋಲ್ ಮಾಡಿ ನಿಂದಿಸಿದ್ದರು. ಅದಕ್ಕೆ ಮುಸ್ಲಿಂ ಧರ್ಮಿಯರಾಗಿದ್ದೇ ಏಕೈಕ ಕಾರಣವಾಗಿತ್ತು. 11 ಜನರ ತಂಡದಲ್ಲಿ ಶಮಿ ಒಬ್ಬರೆ ಮುಸ್ಲಿಂ ಆಗಿದ್ದರು. ಪಾಕಿಸ್ತಾನಕ್ಕೆ ಹೋಗು, ದೇಶದ್ರೋಹಿ ಎಂದು ಕೆಟ್ಟದಾಗಿ ದಾಳಿ ಮಾಡಿದ್ದರು. ಈ ದಾಳಿಯನ್ನು ಭಾರತದ ಹಲವಾರು ಕ್ರೀಡಾಪಟುಗಳು, ರಾಜಕಾರಣಿಗಳು ಖಂಡಿಸಿದ್ದರು.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!


ಭಾರತದ ಹಿರಿಯ ಆಟಗಾರ ಇರ್ಫಾನ್ ಪಠಾಣ್ ಟ್ವೀಟ್ ಮಾಡಿ, “ನಾನು ಕೂಡ ಭಾರತವು  ಪಾಕಿಸ್ತಾನದ ಎದುರು ಸೋತ ಕೆಲ ಪಂದ್ಯಗಳ ಭಾಗವಾಗಿದ್ದೇನೆ. ಆದರೆ ಆಗ ನನಗೆ ಯಾರೂ ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿರಲಿಲ್ಲ. ನಾನು ಕೆಲ ವರ್ಷಗಳ ಹಿಂದಿನ ಭಾರತದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಈ ದುಷ್ಕರ್ಮಿಗಳನ್ನು ತಡೆಯಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಟ್ವೀಟ್ ಮಾಡಿ, “ನಿನ್ನೆ ರಾತ್ರಿ ಭಾರತ ಸೋತ ಪಂದ್ಯದಲ್ಲಿ 11 ಜನರ ತಂಡದಲ್ಲಿ ಮೊಹಮ್ಮದ್ ಶಮಿ ಒಬ್ಬರಾಗಿದ್ದರು. ಅವರೊಬ್ಬರೆ ಮೈದಾನದಲ್ಲಿರಲಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಕ್ರೂರವಾಗಿ ನಿಂದಿಸಲ್ಪಟ್ಟ ಮತ್ತು ಟ್ರೋಲ್‌ಗೆ ಒಳಗಾದ ನಿಮ್ಮ ತಂಡದ ಸಹ ಆಟಗಾರನ ಪರವಾಗಿ ನಿಲ್ಲಲು ನಿಮಗೆ ಸಾಧ್ಯವಾಗದಿದ್ದರೆ ಟೀಮ್ ಇಂಡಿಯಾ, ನೀವು ಬ್ಲಾಕ್ ಲೈವ್ಸ್ ಮ್ಯಾಟರ್‌ಗಾಗಿ ಮಂಡಿಯೂರಿದ್ದ ಯಾವುದೇ ಲೆಕ್ಕಕ್ಕೆ ಬರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಸಂಸದ ಮತ್ತು ಮಾಜಿ ಆಟಗಾರ ಗೌತಮ್ ಗಂಭೀರ್ “ಪಾಕ್ ಗೆದ್ದಾಗ ಪಟಾಕಿ ಸಿಡಿಸಿದವರು ಭಾರತೀಯರಲ್ಲ. ನಾವು ನಮ್ಮ ಹುಡುಗರ ಜೊತೆ ನಿಲ್ಲುತ್ತೇವೆ. ನಾಚಿಕೆಗೇಡು” ಎಂದು ಟ್ವೀಟ್ ಮಾಡಿದ್ದಾರೆ. ಅವರು ಶಮಿ ಬಗ್ಗೆ ಉಲ್ಲೇಖ ಮಾಡಿಲ್ಲ.

ಅದಕ್ಕೆ ವಿನಯ್ ಕುಮಾರ್ ಎಂಬುವವರು ಬ್ಲಾಕ್ ಲೈವ್ಸ್ ಮ್ಯಾಟರ್ ಗೆ ಗೌರವ ಸಲ್ಲಿಸಲು ಮಂಡಿಯೂರಿದ ಎಷ್ಟು ಆಟಗಾರರು ಶಮಿ ಪರವಾಗಿ ನಿಂತರು ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...