Homeಮುಖಪುಟಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್‌ ಉಧಮ್ ಚಿತ್ರ ದ್ವೇಷದಿಂದ ಕೂಡಿದೆ ಎಂದ ಆಸ್ಕರ್ ಜ್ಯೂರಿ: ಸತ್ಯ ಕಹಿ ಎಂದ ಅಭಿಮಾನಿಗಳು

ಸರ್ದಾರ್ ಉದಮ್ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ ವಿವರಿಸಿದ್ದಾರೆ.

- Advertisement -
- Advertisement -

ಸಿನಿಮಾ ಕ್ಷೇತ್ರದ ಪ್ರತಿಷ್ಠತ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಗೆ ಭಾರತದಿಂದ ತಮಿಳಿನ ಕೂಜಂಗಲ್‌ ಸಿನಿಮಾವನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಸ್ಪರ್ಧೆಯಲ್ಲಿ ವಿಕ್ಕಿ ಕೌಶಲ್‌ ನಟನೆಯ ಸರ್ದಾರ್‌ ಉಧಮ್ ಸಿನಿಮಾವು ಇತ್ತು. ಆದರೆ ಈ ಸಿನಿಮಾವನ್ನು ಆಸ್ಕರ್ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಿಲ್ಲ ಎಂದು ವಿವರಿಸಿರುವ ಜ್ಯೂರಿಯ ಸದಸ್ಯರಲ್ಲಿ ಒಬ್ಬರಾದ ಇಂದ್ರದೀಪ್‌ ದಾಸ್‌ಗುಪ್ತ, ’ಈ ಸಿನಿಮಾವು ಬ್ರಿಟಿಷರ ಮೇಲಿನ ನಮ್ಮ ದ್ವೇಷವನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷದ ಆಸ್ಕರ್‌ ಪ್ರಶಸ್ತಿಗೆ ಸಿನಿಮಾಗಳ ಅಧಿಕೃತ ಪ್ರವೇಶವನ್ನು ನಿರ್ಧರಿಸಿದ ಜ್ಯೂರಿ ಸದಸ್ಯರಾದ ಇಂದ್ರದೀಪ್‌ ದಾಸ್‌ಗುಪ್ತ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ, ’ಸರ್ದಾರ್ ಉಧಮ್’ ಸಿನಿಮಾದಲ್ಲಿ ಜಲಿಯನ್‌ ವಾಲಾಬಾಗ್‌ ಘಟನೆಯೂ ದೀರ್ಘವಾಗಿದ್ದು, ಹೆಚ್ಚು ಎಳೆಯಲಾಗಿದೆ. ಭಾರತೀಯ ಸ್ವಾತಂತ್ಯ್ರ ಹೋರಾಟದ ಅಸಾಧಾರಣ ನಾಯಕನ ಮೇಲೆ ಅದ್ದೂರಿ ಚಿತ್ರ ನಿರ್ಮಿಸುವುದು ಪ್ರಾಮಾಣಿಕ ಪ್ರಯತ್ನ. ಆದರೆ ಈ ಪ್ರಕ್ರಿಯೆಯಲ್ಲಿ ಮತ್ತೆ ಬ್ರಿಟಿಷರ ಮೇಲೆ ನಮ್ಮ ದ್ವೇಷವನ್ನು ಬಿಂಬಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ ದ್ವೇಷವನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸರ್ದಾರ್ ಉಧಮ್ ಸಿನಿಮಾ; ಪ್ರಭುತ್ವದ ಹಿಂಸೆಗೆ ಪ್ರತಿಯಾಗಿ ಕ್ರಾಂತಿಕಾರಿ ಮಾರ್ಗ ತುಳಿದ ಯುವಕನ ಕಥೆ


ಉಧಮ್ ಸಿಂಗ್‌ ಸಿನಿಮಾ ಬಗ್ಗೆ ಮಾತನಾಡಿರುವ ಅವರು ಚಿತ್ರದ ಛಾಯಾಗ್ರಹಣಣವನ್ನೂ ಶ್ಲಾಘಿಸಿದ್ದು, ‘ಸಿನಿಮಾ ನಿರ್ಮಾಣವು ಅಂತರಾಷ್ಟ್ರೀಯ ಗುಣಮಟ್ಟಕೆ ಅನುಗುಣವಾಗಿದೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಉಧಮ್ ಸಿನಿಮಾ ಪ್ರೇಮಿಗಳು ಸತ್ಯ ಯಾವಾಗಲೂ ಕಹಿಯಾಗಿರುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಜ್ಯೂರಿಯ ಮತ್ತೊಬ್ಬ ಸದಸ್ಯರಾದ ಸುಮಿತ್‌ ಬಸು ಮಾತನಾಡಿ, ’ಉಧಮ್ ಸಿನಿಮಾದಲ್ಲಿನ ಛಾಯಾಗ್ರಹಣ, ಸಂಕಲನ, ಧ್ವನಿ ವಿನ್ಯಾಸ ಮತ್ತು ಆ ಕಾಲಘಟ್ಟದ ಚಿತ್ರಣ ಸೇರಿದಂತೆ ಸಿನಿಮಾದ ಗುಣಮಟ್ಟಕ್ಕಾಗಿ ಅನೇಕರು ಈ ಸಿನಿಮಾವನ್ನು ಇಷ್ಟ ಪಟ್ಟಿದ್ದಾರೆ. ಈ ಸಿನಿಮಾವೂ ದೀರ್ಘವಾಗಿರುವುದೇ ಸಮಸ್ಯೆ ಎಂದು ನಾನು ಭಾವಿಸಿದೆ. ಈ ಸಿನಿಮಾವು ತುಂಬಾ ತಡವಾದ ಕ್ಲೈಮ್ಯಾಕ್ಸ್‌ ಹೊಂದಿದ್ದು, ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡದ ಹುತಾತ್ಮರಾದ ನೋವನ್ನು ಅನುಭವಿಸಲು ವೀಕ್ಷಕನಿಗೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ.

ಶೂಜಿತ್‌ ಸಿರ್ಕಾರ್‌ ನಿರ್ದೇಶನದ ಸರ್ದಾರ್‌ ಉಧಮ್‌ ಸಿನಿಮಾವು ಜಲಿಯನ್‌ ವಾಲಾಬಾಗ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಮೈಕೇಲ್‌ ಓ ಡಯರ್‌ನನ್ನು ಕೊಂದ ಸ್ವಾತಂತ್ಯ್ರ ಹೋರಾಟಗಾರ ಸರ್ದಾರ್‌ ಉದಾಮ್‌ ಸಿಂಗ್‌ ಅವರ ಜೀವನ ಮತ್ತು ಹೋರಾಟಗಳನ್ನು ಚಿತ್ರಿಸಿದೆ. ಲಂಡನ್‌ನ ಕ್ಯಾಕ್ಸ್‌ಟನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಈಸ್ಟ್‌ ಇಂಡಿಯಾ ಅಸೋಸಿಯೇಷನ್‌ ಮತ್ತು ಸೆಂಟ್ರಲ್‌ ಏಷ್ಯನ್‌ ಸೊಸೈಟಿಯ ಜಂಟಿ ಸಭೆಯಲ್ಲಿ ಉದಮ್ ಸಿಂಗ್ ಡಯರ್‌ಗೆ ಗುಂಡು ಹಾರಿಸಿದ್ದರು.

ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಸಿನಿಮಾವನ್ನು ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಆಯ್ಕೆ ಮಾಡುತ್ತದೆ. ಈ ವರ್ಷ 15 ಸದಸ್ಯರಿರುವ ಜ್ಯೂರಿಗೆ ಚಲನಚಿತ್ರ ನಿರ್ಮಾಪಕ ಶಾಜಿ ಎನ್. ಕರುಣ್‌ ನೇತೃತ್ವ ವಹಿಸಿದ್ದರು. 94ನೇ ಆಸ್ಕರ್‌ ಪ್ರಶಸ್ತಿಯ ‘ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್‌ ಫಿಲ್ಮ್ಸ್‌’ ಕೆಟಗೆರಿಯಲ್ಲಿ ಸ್ಫರ್ಧಿಸಲು ಭಾರತದಿಂದ ತಮಿಳು ಭಾಷೆಯ ’ಕೂಜಂಗಲ್‌ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್​ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್​’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ಸ್ಪರ್ಧೆಯಲ್ಲಿದ್ದವು.


ಇದನ್ನೂ ಓದಿ: ಸರ್ದಾರ್ ಉಧಮ್: ಇದು ಶೂಜಿತ್ ನ ಗೆಲುವು ಮತ್ತು ಪ್ರಜಾಪ್ರಭುತ್ವದ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...