Homeಕರ್ನಾಟಕಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

ಬೆಂಗಳೂರು: ಶನಿವಾರ ‘ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭ

- Advertisement -
- Advertisement -

ನಾಡೋಜ ಡಾ. ಬರಗೂರು ಪ್ರತಿಷ್ಠಾನದ ವತಿಯಿಂದ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ‘ನಾಡೋಜ ಬರಗೂರು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಅಕ್ಟೋಬರ್‌ 30 ರ ಶನಿವಾರದಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ.

ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆಯಾದರೂ ಕೊರೊನಾ ನಿರ್ಭಂದದ ಹಿನ್ನೆಲೆಯಲ್ಲಿ 2020 ಮತ್ತು 2021 ರ ಪ್ರಶಸ್ತಿಯನ್ನು ಒಟ್ಟಿಗೆ ನೀಡಲಾಗುತ್ತಿದೆ.

ಇದನ್ನೂ ಓದಿ: ಲಿಪಿ, ಲಿಪಿಕಾರನ ಇತಿಹಾಸ ಹಿಡಿದಿಡುವ ಷ. ಶೆಟ್ಟರ್ ಅವರ ’ಹಳಗನ್ನಡ’

2020 ನೇ ಸಾಲಿನ ಬರಗೂರು ಪ್ರಶಸ್ತಿಯ ಸಿನಿಮಾ ಕ್ಷೇತ್ರ ವಿಭಾಗದಲ್ಲಿ ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಸಾರಾ ಅಬೂಬಕರ್‌ ಅವರು ಆಯ್ಕೆಯಾಗಿದ್ದಾರೆ. 2021 ನೇ ಸಾಲಿನಲ್ಲಿ ಸಿನಿಮಾ ಕ್ಷೇತ್ರದಲ್ಲಿ ಹಿನ್ನಲೆ ಗಾಯಕಿ ಬಿ.ಕೆ. ಸುಮಿತ್ರಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಚಂದ್ರಕಾಂತ ಪೋಕಳೆ ಅವರಿಗೆ ನೀಡಲಾಗುತ್ತದೆ.

ಹಿರಿಯ ಸಿನಿಮಾ ನಿರ್ದೇಶಕ ಎಸ್‌.ಕೆ. ಭಗವಾನ್ ಅವರು ಪ್ರಶಸ್ತಿ ಸಮ್ಮಾನಿತರಿಗೆ ಪ್ರದಾನ ಮಾಡಲಿದ್ದಾರೆ.

ಸಿನಿಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು,  ಭಾರತದ ಅತ್ಯಂತ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರಲ್ಲೊಬ್ಬರಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ತಮ್ಮ 27 ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ 14 ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ ದಕ್ಷಿಣ ಏಷ್ಯಾ ಫೆಡರೇಷನ್‌ನ ಕ್ರಿಸ್ಟಲ್ ಗ್ಲೋಬ್ ಪ್ರಶಸ್ತಿ, ರಜತ ಕಮಲ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಾಹಿತಿ ಸಾರಾ ಅಬೂಬಕರ್‌ ಅವರು ಮೂಲತಃ ಕೇರಳದ ಕಾಸರಗೋಡಿನವರಾಗಿದ್ದಾರೆ. ‘ಚಂದ್ರಗಿರಿಯ ತೀರದಲ್ಲಿ’, ‘ಸಹನಾ’, ‘ಚಪ್ಪಲಿಗಳು’ ಸೇರಿದಂರೆ ಹಲವಾರು ಕಾದಂಬರಿ, ಕಥೆ, ಬಾನುಲಿ ನಾಟಕ, ಲೇಕನ ಮತ್ತು ಅನುವಾದವನ್ನು ಮಾಡಿರುವ ಅವರು ಕನ್ನಡ ಪ್ರಮುಖ ಲೇಖಕಿಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿವೆ.

ಚಿಕ್ಕಮಗಳೂರು ಜಿಲ್ಲೆಯ ಬಿ. ಕೆ. ಸುಮಿತ್ರ ಅವರು ಕನ್ನಡ ಚಿತ್ರರಂಗದ ಪ್ರಮುಖ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರು. ಸಂಗೀತದ ಎಲ್ಲ ಪ್ರಕಾರಗಳಲ್ಲೂ ಹಾಡಿರುವ ಹೆಗ್ಗಳಿಕೆ ಇವರದು. ಇವರಿಗೆ ಕೆಂಪೇಗೌಡ ಪ್ರಶಸ್ತಿ, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶ್ತಸ್ತಿಗೆ ಲಭಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಚಂದ್ರಕಾಂತ ಪೋಕಳೆ ಅವರು 2007 ರವರೆಗೆ ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮರಾಠಿಯಿಂದ ಕನ್ನಡಕ್ಕೆ ಭಾಷಾಂತರಕಾರರಾಗಿ ಸಲ್ಲಿಸಿದ ಇವರ ಸೇವೆ ಗಮನಾರ್ಹವಾಗಿದೆ. ಇದುವರೆಗೆ ಸುಮಾರು 100 ಮರಾಠಿ ಕೃತಿಗಳನ್ನು ಭಾಷಾಂತರ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಇವರಿಗೆ ಸಂದಿವೆ.

ಇದನ್ನೂ ಓದಿ: ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...