Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...