Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...