Homeಮುಖಪುಟಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

ಲೆಸ್ಬಿಯನ್ ಜೋಡಿ ‘ಕರ್ವಾ ಚೌತ್‌’ ಆಚರಿಸುವ ಜಾಹೀರಾತು ಹಿಂಪಡೆದ ಡಾಬರ್‌!

- Advertisement -
- Advertisement -

ಲೆಸ್ಬಿಯನ್‌‌ ಜೋಡಿಯೊಂದು ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ‘ಫೆಮ್ ಸ್ಕಿನ್‌ಕೇರ್‌’ ಕಂಪೆನಿಯ ಜಾಹಿರಾತಿನ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಕಂಪೆನಿಯು ತನ್ನ ಜಾಹಿರಾತನ್ನು ವಾಪಾಸು ಪಡೆದಿದೆ. ಈ ಮೂಲಕ ತನ್ನ ಉತ್ಪನ್ನಗಳ ಜಾಹಿರಾತನ್ನು ಆಕ್ರೋಶಕ್ಕೆ ಮಣಿದು ವಾಪಾಸು ಪಡೆಯುತ್ತಿರುವ ಕಂಪೆನಿಗಳ ಪಟ್ಟಿಗೆ ಡಾಬರ್‌ ಮಾಲಿಕತ್ವದ ಫೆಮ್ ಸ್ಕಿನ್‌ಕೇರ್‌ ಸೇರಿಕೊಂಡಿತು.

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್‌’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿತ್ತು. ಇದರ ವಿರುದ್ದ ನರೋತ್ತಮ್ ಮಿಶ್ರಾ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಇಂದು ಅವರು ಲೆಸ್ಬಿಯನ್ನರು ತಮ್ಮ ಕರ್ವಾ ಚೌತ್‌ ಉಪವಾಸವನ್ನು ಮುರಿಯುವುದನ್ನು ತೋರಿಸುತ್ತಿದ್ದಾರೆ …ನಾಳೆ ಅವರು ಇಬ್ಬರು ಹುಡುಗರು ಮದುವೆಯಾಗುವುದನ್ನು ತೋರಿಸಬಹುದು. ಇದು ಅಪಾಯಕಾರಿ ಆಗಿದೆ. ಜಾಹೀರಾತನ್ನು ಪರಿಶೀಲಿಸಲು ನಾನು ಡಿಜಿಪಿಗೆ ನಿರ್ದೇಶನ ನೀಡಿದ್ದೇನೆ. ಅದನ್ನು ತೆಗೆದುಹಾಕಲು ಕಂಪನಿಯನ್ನು ಕೇಳುತ್ತೇನೆ” ಎಂದು ನರೋತ್ತಮ್‌ ಹೇಳಿದ್ದಾರೆ.

ಇದನ್ನೂ ಓದಿ: ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್‌’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

‘ಕರ್ವಾ ಚೌತ್‌’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡ ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ನರೋತ್ತಮ್‌ ಅವರ ಎಚ್ಚರಿಕೆಯ ನಂತರ ಡಾಬರ್ ಜಾಹೀರಾತನ್ನು ಹಿಂತೆಗೆದುಕೊಳ್ಳುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಅದು “ಜನರ ಭಾವನೆಗಳನ್ನು ಘಾಸಿಗೊಳಿಸುವ ಯಾವುದೆ ಉದ್ದೇಶ ಇರಲಿಲ್ಲ” ಎಂದು ಹೇಳಿದ್ದು, ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ಹೇಳಿದೆ.

ಜೊತೆಗೆ ಕಂಪೆನಿ ತನ್ನ ಮತ್ತೊಂದು ಹೇಳಿಕೆಯಲ್ಲಿ, “ಡಾಬರ್ ಮತ್ತು ಫೆಮ್ ಒಂದು ಬ್ರ್ಯಾಂಡ್ ಆಗಿ ವೈವಿಧ್ಯತೆ, ಒಳಗೊಳ್ಳುವಿಕೆ ಮತ್ತು ಸಮಾನತೆಗಾಗಿ ಶ್ರಮಿಸುತ್ತದೆ. ನಮ್ಮ ಸಂಸ್ಥೆಯಲ್ಲಿ ಮತ್ತು ನಮ್ಮ ಸಮುದಾಯಗಳಲ್ಲಿ ಈ ಮೌಲ್ಯಗಳನ್ನು ನಾವು ಹೆಮ್ಮೆಯಿಂದ ಬೆಂಬಲಿಸುತ್ತೇವೆ. ನಮ್ಮ ಅಭಿಯಾನಗಳು ಕೂಡ ಅದನ್ನೇ ಪ್ರತಿಬಿಂಬಿಸುತ್ತವೆ. ಎಲ್ಲರೂ ನಮ್ಮ ನಿಲುವನ್ನು ಒಪ್ಪುವುದಿಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಜೊತೆಗೆ ವಿಭಿನ್ನ ದೃಷ್ಟಿಕೋನವನ್ನು ಹೊಂದುವ ಅವರ ಹಕ್ಕನ್ನು ನಾವು ಗೌರವಿಸುತ್ತೇವೆ. ನಮ್ಮ ಉದ್ದೇಶವು ಯಾವುದೇ ನಂಬಿಕೆಗಳು, ಆಚಾರಗಳು ಮತ್ತು ಸಂಪ್ರದಾಯಗಳನ್ನು, ಧಾರ್ಮಿಕತೆ ಅಥವಾ ಇನ್ಯಾವುದೇ ರೀತಿಯ ವಿಷಯಗಳಲ್ಲಿ ನೋಯಿಸುವುದಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಇಷ್ಟೆ ಅಲ್ಲದೆ ಕಂಪನಿಯು ತನ್ನ ಹೇಳಿಕೆಯಲ್ಲಿ “ಬ್ರ್ಯಾಂಡ್ ಮತ್ತು ಪ್ರಚಾರಕ್ಕಾಗಿ ತಮ್ಮ ಬೆಂಬಲವನ್ನು ನೀಡಿದ ಪ್ರತಿಯೊಬ್ಬರಿಂದ ವಿನಮ್ರರಾಗಿದ್ದೇವೆ” ಎಂದು ಹೇಳಿದೆ.

‘ಕರ್ವಾ ಚೌತ್‌’ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್‌ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಈ ತಿಂಗಳ ಆರಂಭದಲ್ಲಿ ಖ್ಯಾತ ಬಟ್ಟೆ ಬ್ರಾಂಡ್ ಫ್ಯಾಬ್‌ಇಂಡಿಯಾ ತನ್ನ ಜಾಹಿರಾತನ್ನು ವಾಪಾಸು ಪಡೆದುಕೊಂಡಿತ್ತು. ಅದು ದೀಪಾವಳಿ ಆಚರಣೆಯನ್ನು ಪರ್ಶಿಯನ್‌ ಭಾಷೆಯಲ್ಲಿ ‘ಜಶ್ನ್-ಎ-ರಿವಾಜ್’ ಎಂದು ಕರೆದಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಕಳೆದ ವರ್ಷ ಟಾಟಾ ಗ್ರೂಪ್‌ನ ಆಭರಣ ಬ್ರ್ಯಾಂಡ್ ‘ತನಿಷ್ಕ್’ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ಅದರ ಜಾಹಿರಾತಿನಲ್ಲಿ ಮುಸ್ಲಿಂ ಕುಟುಂಬವು ತಮ್ಮ ಹಿಂದೂ ಸೊಸೆಗಾಗಿ ‘ಸೀಮಂತ’ ಮಾಡುವುದನ್ನು ತೋರಿಸಿತ್ತು. ನಂತರ ಟಾಟಾ ಈ ಜಾಹಿರಾತನ್ನು ವಾಪಾಸು ಪಡೆದಿತ್ತು.

ಅದಕ್ಕೂ ಮೊದಲು 2019 ರಲ್ಲಿ ಹಿಂದೂಸ್ತಾನ್ ಯೂನಿಲಿವರ್‌ನ ‘ಸರ್ಫ್ ಎಕ್ಸೆಲ್’ ಸಹ ಮಕ್ಕಳು ಹೋಳಿ ಆಡುವ ಜಾಹೀರಾತನ್ನು ಬಿಡುಗಡೆ ಮಾಡಿ ನಂತರ ಹಿಂಪಡೆಯಿತು. ಅದರಲ್ಲಿ, ಚಿಕ್ಕ ಹುಡುಗಿಯೊಬ್ಬರು, ತನ್ನ ಮುಸ್ಲಿಂ ಸ್ನೇಹಿತನಿಗೆ ಹೋಳಿಯ ಯಾವುದೆ ಬಣ್ಣಗಳು ತಾಗದಂತೆ ಮಸೀದಿಗೆ ತಲುಪಲು ಸಹಾಯ ಮಾಡುತ್ತಾರೆ.

ಇದನ್ನೂ ಓದಿ: ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...