Homeಮುಖಪುಟಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

- Advertisement -
- Advertisement -

ತಮಿಳುನಾಡಿನ ಸೇಲಂ ಜಿಲ್ಲೆಯ ಆನೈವಾರಿ ಜಲಪಾತದ ಬಳಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ರಕ್ಷಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಕೂಡಾ ಈ ವಿಡಿಯೊ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇಬ್ಬರ ಜೀವ ಉಳಿಸಿದವರನ್ನು ಸರ್ಕಾರದ ವತಿಯಿಂದ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

ಘಟನೆಯು ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಸ್ಥಳವಾಗಿರುವ ಆನೈವಾರಿ ಜಲಪಾತ ಪ್ರದೇಶವನ್ನು ಕೊರೊನಾ ಲಾಕ್‌ಡೌನ್‌ ನಂತರ ಎರಡು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ತೆರೆಯಲಾಗಿತ್ತು. ಇಲ್ಲಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯು ಆಕಸ್ಮಿಕವಾಗಿ ಅಲ್ಲಿ ಸಿಲುಕಿ ಬಿದ್ದಿದ್ದರು. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿ ಅವರನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

ವೀಡಿಯೊದಲ್ಲಿ, ಇನ್ನೊಂದು ಬದಿಯಲ್ಲಿ ಇರುವ ಜನರು, “ಮೇಲೆ ಹತ್ತಬೇಡಿ ಬೀಳಬಹುದು, ಅಲ್ಲೇ ನಿಲ್ಲಿ ಎಂದು” ಕಿರುಚುತ್ತಾರೆ. ಅದಾಗಿಯೂ ಹಗ್ಗವನ್ನು ಬಳಸಿ ಅರಣ್ಯ ಇಲಾಖೆಯ ಸಿಬ್ಬಂದಿ ಮೊದಲಿಗೆ ಮಗುವನ್ನು, ನಂತರ ಮಹಿಳೆಯನ್ನು ಎಚ್ಚರಿಕೆಯಿಂದ ಮೇಲಕ್ಕೆತ್ತುತ್ತಾರೆ. ತಾಯಿ ಮತ್ತು ಮಗು ಅಪಾಯದಿಂದ ಪಾರಾದ ನಂತರ ರಕ್ಷಣಾ ಕಾರ್ಯದಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಸಮತೋಲನ ಕಳೆದುಕೊಂಡು ನೀರಿಗೆ ಬೀಳುತ್ತಾರೆ.

ವೈರಲ್‌ ವಿಡಿಯೊ ಈ ಹಂತದಲ್ಲಿ ಕೊನೆಗೊಂಡರೂ, ಆಯಾತಪ್ಪಿ ನೀರಿಗೆ ಬಿದ್ದವರು ನದಿಯನ್ನು ಈಜಿ ಯಾವುದೆ ಅಪಾಯವಿಲ್ಲದೆ ದಡ ತಲುಪಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಗು ಮಾತ್ರವಲ್ಲದೆ ಇನ್ನೂ ಕೆಲವರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಮುನ್ನೆಲೆಗೆ ಬರುವುದೇ ‘ತಮಿಳುನಾಡು ಮಾದರಿ?’

ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯದ ವರದಿಯಾಗಿಲ್ಲ ಎಂದು ಸೇಲಂ ಜಿಲ್ಲಾ ಅರಣ್ಯಾಧಿಕಾರಿ ಕೆ ಗೌತಮ್ ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅನೈವಾರಿ ಜಲಪಾತವು ಗುರುತಿಸಲ್ಪಟ್ಟ ಪರಿಸರ ಪ್ರವಾಸೋದ್ಯಮ ತಾಣವಾಗಿದೆ. ಕಲ್ಲವರಾಯನ ಬೆಟ್ಟಗಳಿಂದ ಬರುವ ಮಳೆ ನೀರು ಇಲ್ಲಿ ಜಲಪಾತವಾಗಿ ಪರಿವರ್ತನೆಯಾಗುತ್ತದೆ. ಇದು ಅತ್ತೂರು ಪ್ರದೇಶವಾಗಿದ್ದು; ಈ ಬೆಟ್ಟದ ಇನ್ನೊಂದು ಬದಿಯಲ್ಲಿರುವ ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾದರೆ, ಅದು ಇಲ್ಲಿನ ಜನರಿಗೆ ತಿಳಿಯುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಕರ್ಮಂಡುರೈ ಪ್ರದೇಶದಲ್ಲಿ ಮಳೆಯಾಗಿ 20-30 ನಿಮಿಷಗಳಲ್ಲಿ, ಪ್ರವಾಹದ ನೀರು ಈ ಪ್ರದೇಶವನ್ನು ತಲುಪುತ್ತದೆ. ಇದು ಪ್ರತಿ ವರ್ಷ ನಡೆಯುತ್ತದೆ. ಈ ಬಾರಿ ನೀರಿನ ಪ್ರಮಾಣ ಹೆಚ್ಚಿದೆ. ಇದು ತಿಳಿದಿರದ ಜನರು ಆ ಬದಿಯಲ್ಲಿ ಸಿಕ್ಕಿಬಿದ್ದರು. ಇನ್ನೊಂದು ಬದಿಗೆ ಬರಲು ಯಾವುದೇ ದಾರಿ ಇರುವುದಿಲ್ಲ. ಅಲ್ಲಿರುವವರು ಹಗ್ಗವನ್ನು ಬಳಸಿ ಮಾತ್ರ ಇನ್ನೊಂದು ಬದಿಯನ್ನು ತಲುಪಬಹುದು. ನಮ್ಮ ಜನರು ಈಗಾಗಲೇ ಅಂತಹ ಸಂದರ್ಭಗಳ ಬಗ್ಗೆ ತರಬೇತಿ ಪಡೆದಿದ್ದರಿಂದ, ಅವರು ಸಾರ್ವಜನಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು. ನಾವು ತಕ್ಷಣ ಜನರನ್ನು ಖಾಲಿ ಮಾಡಿದ್ದೇವೆ ಮತ್ತು ಪ್ರದೇಶವನ್ನು ಮುಚ್ಚಲು ಆದೇಶಿಸಿದ್ದೇವೆ” ಎಂದು ಕೆ. ಗೌತಮ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದಾಗಿ ಆನೈವಾರಿ ಜಲಪಾತಗಳು, ವಳುಕ್ಕುಪರೈ ಮತ್ತು ಯೆರ್ಕಾಡ್‌ನ ಮತ್ತೊಂದು ಪ್ರವಾಸೋದ್ಯಮ ಸ್ಥಳವನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಡಿಎಫ್‌ಒ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು – ರಾಜ್ಯದ ಸರ್ಕಾರಿ ಉದ್ದಿಮೆಗಳ 2.87 ಲಕ್ಷ ಸಿಬ್ಬಂದಿಗೆ 216.38 ಕೋಟಿ ‘ದೀಪಾವಳಿ ಬೋನಸ್’!

“ಘಟನೆಯ ವರದಿ ಇನ್ನೂ ನನಗೆ ತಲುಪಿಲ್ಲ. ಆ ಬಳಿಕವಷ್ಟೇ ರಕ್ಷಿಸಿದವರ ವಿವರ ತಿಳಿಯಲಿದೆ” ಎಂದು ಅವರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘಟನೆಯ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಾಯಿ ಮತ್ತು ಮಗಳನ್ನು ರಕ್ಷಿಸಿದವರ ಧೈರ್ಯದ ಕಾರ್ಯ ಶ್ಲಾಘನೀಯ; ಅವರನ್ನು ಸರ್ಕಾರದಿಂದ ಗುರುತಿಸಿ  ಗೌರವಿಸಲಾಗುವುದು. ತಮ್ಮ ಪ್ರಾಣವನ್ನು ಲೆಕ್ಕಿಸದೆ ಇತರರ ಪ್ರಾಣವನ್ನು ಉಳಿಸುವ ಧೈರ್ಯ ತೋರುವವರಲ್ಲಿ ಮಾನವೀಯತೆ ಬೆಳಗುತ್ತಿದೆ! ದುರಂತದ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ಸಭ್ಯ ಜಗತ್ತು.” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...