Homeಮುಖಪುಟಮಳೆಹಾನಿಗೀಡಾದ ರೈತರಿಗೆ ಕೂಡಲೆ ಪರಿಹಾರ ನೀಡಿ: ಪಂಜಾಬ್ ಸಿಎಂಗೆ ಕೇಜ್ರಿವಾಲ್ ಒತ್ತಾಯ

ಮಳೆಹಾನಿಗೀಡಾದ ರೈತರಿಗೆ ಕೂಡಲೆ ಪರಿಹಾರ ನೀಡಿ: ಪಂಜಾಬ್ ಸಿಎಂಗೆ ಕೇಜ್ರಿವಾಲ್ ಒತ್ತಾಯ

- Advertisement -
- Advertisement -

ಅಕಾಲಿಕ ಮಳೆಯಿಂದ ಹಾನಿಗೀಡಾದ ಗಡಿ ರಾಜ್ಯ ಪಂಜಾಬ್‌ನ ರೈತರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಒತ್ತಾಯಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಅನುಭವಿಸಿದ ರಾಷ್ಟ್ರ ರಾಜಧಾನಿಯ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ ಕಳೆದ ವಾರ ಘೋಷಿಸಿತ್ತು.

“ಅಕಾಲಿಕ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳಲ್ಲಿ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ದೆಹಲಿಯಲ್ಲಿ ಮಳೆಯಿಂದ ನಷ್ಟ ಅನುಭವಿಸಿದ ರೈತರಿಗೆ ನಾವು ಪ್ರತಿ ಹೆಕ್ಟೇರ್‌ಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದೇವೆ. ಹೀಗಾಗಿ ಅವರ ರಾಜ್ಯದಲ್ಲಿ ರೈತರಿಗೆ ಸೂಕ್ತ ಮತ್ತು ತಕ್ಷಣದ ಪರಿಹಾರವನ್ನು ನೀಡುವಂತೆ ನಾನು ಪಂಜಾಬ್ ಸಿಎಂ ಚನ್ನಿ ಅವರಿಗೆ ಮನವಿ ಮಾಡುತ್ತೇನೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ದೆಹಲಿಯ ಎಲ್ಲಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಬೆಳೆ ನಾಶವಾಗಿರುವ ಸ್ಥಳಗಳ ಸಮೀಕ್ಷೆ ನಡೆಸುತ್ತಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ. ಮುಂದಿನ ಒಂದೂವರೆ ತಿಂಗಳೊಳಗೆ ರೈತರಿಗೆ ಪರಿಹಾರವನ್ನು ವಿತರಿಸಬಹುದು” ಎಂದು ಅರವಿಂದ್ ಕೇಜ್ರಿವಾಲ್ ಕಳೆದ ವಾರ ಹೇಳಿದ್ದರು.

ಕಳೆದ ವಾರ ಸುರಿದ ಅಕಾಲಿಕ ಭಾರಿ ಮಳೆ, ಜೊತೆಗೆ ಆಲಿಕಲ್ಲು ಮಳೆಯು ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಪ್ರಮುಖ ಬೆಳೆಗಳಾದ ಭತ್ತ, ಕಬ್ಬು, ಆಲೂಗಡ್ಡೆ ಮತ್ತು ಬಟಾಣಿಯನ್ನು ನಾಶಗೊಳಿಸಿದೆ.

ಪಂಜಾಬ್‌ನಲ್ಲಿ ಮಂಡಿಗಳಲ್ಲಿ ಮಾರಾಟಕ್ಕೆ ತಂದಿದ ಬೆಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದು, ರಸ್ತೆ ಬದಿಗಳಲ್ಲಿ ನೀರಿನಲ್ಲಿ ಬೆಳೆ ಹರಿಯುತ್ತಿರುವ ದೃಶ್ಯಗಳು ವೈರಲ್ ಆಗಿದ್ದವು. ಆಲಿಕಲ್ಲು ಮಳೆಯಿಂದ ಬೆಳೆ ನೆಲಕ್ಕೆ ಒರಗಿ ಹಾಳಾಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....