Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...