Homeಮುಖಪುಟನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿರುವುದು ವಿವಾದಿತ ಪೋಸ್ಟ್‌ಗೆ ಕಾರಣವಾಗಿದೆ.

- Advertisement -
- Advertisement -

ತ್ರಿಪುರ ಮತ್ತು ಮೇಘಾಲಯದ ಮಾಜಿ ರಾಜ್ಯಪಾಲರಾದ ತಥಾಗತ ರಾಯ್‌ರವರು ಬಿಜೆಪಿ ನಾಯಕ, ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಅವರ ಚಿತ್ರವನ್ನು ನಾಯಿಯ ಚಿತ್ರದೊಂದಿಗೆ ಕೊಲಾಜ್‌ ಮಾಡಿ ಟ್ವಿಟರ್‌ನಲ್ಲಿ ಹಂಚಿಕೊಂಡು ಬಿಜೆಪಿ ಪಕ್ಷವನ್ನು ದಿಗ್ಭ್ರಮೆಗೆ ತಳ್ಳಿದ್ದಾರೆ.

ಹೀನಾಯ ಸೋಲಿನ ಬಳಿಕವೂ ಕೈಲಾಶ್‌ ವಿಜಯವರ್ಗಿಯ ಪಶ್ಚಿಮ ಬಂಗಾಳದ ಉಸ್ತುವಾರಿಯಾಗಿ ಮುಂದುವರೆದಿದ್ದಾರೆ ಎಂಬ ನೆಟ್ಟಿಗರೊಬ್ಬರ ಪೋಸ್ಟ್‌ಗೆ ತಥಾಗತ ರಾಯ್‌ರವರು ‘ಮತ್ತೊಮ್ಮೆ ಪಶ್ಚಿಮ ಬಂಗಾಳದಲ್ಲಿ ವೊಡಾಫೋನ್’ ಎಂಬ ಶೀರ್ಷಿಕೆಯೊಂದಿಗೆ ಕೈಲಾಶ್‌ ವಿಜಯವರ್ಗಿಯರವರನ್ನು ನಾಯಿಗೆ ಹೋಲಿಸಿ ಪೋಸ್ಟ್ ಮಾಡಿದ್ದಾರೆ.

ಸುಗತೊ ಎಂಬುವವರು “ಕೈಲಾಶ್‌ ವಿಜಯವರ್ಗಿಯರನ್ನು ಯಾರೂ ಉಲ್ಲೇಖಿಸುತ್ತಿಲ್ಲ. ಬದಲಿಗೆ ಅವರ ಹತ್ತಿರದ ಹಿರಿಯ ಬಿಜೆಪಿ ನಾಯಕರು ಅವರನ್ನು ರಕ್ಷಿಸುತ್ತಿದ್ದಾರೆ. ಆಶ್ಚರ್ಯವೆಂದರೆ ಅವರಿನ್ನು ಪಶ್ಚಿಮ ಬಂಗಾಲದ ಉಸ್ತುವಾರಿಯಾಗಿರುವುದು. ಅದೇ ಸಂದರ್ಭದಲ್ಲಿ ಬಿಜೆಪಿ ಕಲ್ಕತ್ತಾದಲ್ಲಿ ಲೆಕ್ಕಕ್ಕೆ ಇಲ್ಲದಂತಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ವಿಜಯವರ್ಗಿಯ ಅವರ ಜೊತೆಗೆ ವೊಡಾಫೋನ್‌ನ ಪಗ್‌(ನಾಯಿ) ಇರುವ ಫೋಟೊ ಮೂಲಕ ತಥಾಗತ ರಾಯ್ ಪ್ರತಿಕ್ರಿಯಿಸಿದ್ದಾರೆ.

ಬಂಗಾಳದ ಮಾಜಿ ಬಿಜೆಪಿ ಮುಖ್ಯಸ್ಥರಾದ ತಥಾಗತ ರಾಯ್, ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪಕ್ಷದ ನಾಯಕರನ್ನು ಟೀಕಿಸುತ್ತಾ ಬಂದಿದ್ದಾರೆ. ಮೇಘಾಲಯ ಮತ್ತು ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗತ ರಾಯ್ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಬಂಗಾಳದಲ್ಲಿ ಬಿಜೆಪಿಯ ಸೋಲಿನ ನಂತರ ರಾಯ್ ಅವರು ಪಕ್ಷದ ಬಂಗಾಳದ ನಾಯಕರಾದ ವಿಜಯವರ್ಗಿಯ ಮತ್ತು ದಿಲೀಪ್ ಘೋಷ್ ಅವರ ಟಿಕೆಟ್ ಹಂಚಿಕೆಯ ನಿರ್ಧಾರಗಳನ್ನು ದೂಷಿಸಿದ್ದರು. ಟ್ವೀಟ್ ಒಂದರಲ್ಲಿ “ಕೈಲಾಶ್-ದಿಲೀಪ್-ಶಿವ್-ಅರವಿಂದ್‌ರವರು ಪ್ರಪಂಚದ ಅತಿ ದೊಡ್ಡ ಪಕ್ಷದ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರ ಹೆಸರನ್ನು ಮಣ್ಣುಪಾಲು ಮಾಡಿದ್ದಾರೆ. ಅಗರ್‌ವಾಲ್ ಭವನದಲ್ಲಿ (ಬಂಗಾಳದ ಬಿಜೆಪಿ ಕಚೇರಿ)  ಮತ್ತು 7 ಸ್ಟಾರ್ ಹೋಟೆಲ್‌ಗಳಲ್ಲಿ ಕುಳಿತು ತೃಣಮೂಲ ಕಾಂಗ್ರೆಸ್‌ನಿಂದ ಹೊರಬಂದ ಕಸಕಡ್ಡಿಗಳಿಗೆ ಟಿಕೆಟ್ ನೀಡಿ ಪಕ್ಷದ ಗೌರವನ್ನು ಹಾಳುಗೆಡವಿದರು” ಎಂದು ಬರೆದಿದ್ದರು.


ಇದನ್ನೂ ಓದಿ: ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವಾಗಿದ್ದು ಮೋದಿಯವರ ಟ್ವೀಟ್‌ನಿಂದ ಹೊರತು ಸಾರ್ವಜನಿಕ ಮನವಿಯಿಂದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...