Homeಮುಖಪುಟಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

ಕ್ಲಬ್‌ಹೌಸ್‌ ಸರ್ವರ್‌ ಡೌನ್‌: ಮಾತಿನ ಮಂಟಪ ಪ್ರಿಯರಿಗೆ ಚಡಪಡಿಕೆ

- Advertisement -
- Advertisement -

‘ಮಾತಿನ ಮಂಟಪ’ ಎಂದೇ ಖ್ಯಾತವಾಗಿರುವ ‘ಕ್ಲಬ್‌ ಹೌಸ್‌’ ಸರ್ವರ್‌ ಡೌನ್ ಆಗಿದ್ದು, ಅನೇಕ ಬಳಕೆದಾರರು ವರದಿ ಮಾಡಿದ್ದಾರೆ. ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜರ್ಮನಿ, ಇಂಡಿಯಾ, ಈಜಿಪ್ಟ್‌, ಅಮೆರಿಕದ ಹಲವು ನಗರಗಳಲ್ಲಿ ಸರ್ವರ್‌‌ ಡೌನ್‌ ಆಗಿದ್ದು, ಮಾತಿನ ಮಂಟಪದಲ್ಲಿ ಚರ್ಚೆಗಳನ್ನು ನಡೆಸುತ್ತಿದ್ದವರಿಗೆ ಚಡಪಡಿಕೆ ಆರಂಭವಾಗಿದೆ.

ಈ ಕುರಿತು ‘ಕ್ಲಬ್‌ ಹೌಸ್‌’ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಸರ್ವರ್‌ ಡೌನ್‌ ಆಗಿರುವ ಕುರಿತು ಟ್ವೀಟ್ ಮಾಡಲಾಗಿದೆ. ‘ಸಮಸ್ಯೆಯನ್ನು ಬಗೆಹರಿಸಲಾಗುವುದು’ ಕ್ಲಬ್‌ಹೌಸ್‌ ಸಂಸ್ಥೆ ಹೇಳಿದೆ.

ಅಮೆಜಾನ್‌, ಟ್ವಿಟ್ಟರ್‌, ಫೇಸ್‌ಬುಕ್‌ ಮೊದಲಾದ ಟೆಕ್‌ ಸಂಸ್ಥೆಗಳನ್ನು ಕ್ಲಬ್‌ಹೌಸ್‌ ನಿದ್ದೆಗೆಡಿಸಿತ್ತು. ಮಾತಿನ ಮಾದರಿಯ ಅಪ್ಲಿಕೇಷನ್‌ಗಳು ಅಭಿವೃದ್ಧಿಪಡಿಸಲು ಇತರ ಸಂಸ್ಥೆಗಳು ಹೆಜ್ಜೆ ಇರಿಸಿದ್ದವು ಎನ್ನಲಾಗಿದೆ.

ಇತ್ತೀಚೆಗೆ ಫೇಸ್‌ಬುಕ್‌ ಸಂಸ್ಥೆಯ ಫೇಸ್‌ಬುಕ್‌, ಮೆಸೇಂಜರ್‌‌, ಇನ್‌ಸ್ಟಾಗ್ರಾಮ್‌ ಅಪ್ಲಿಕೇಷನ್‌ಗಳು ಸರ್ವರ್‌ ಡೌನ್‌ ಆಗಿ, ಬಳಕೆದಾರರು ಚಡಪಡಿಸಿದ್ದರು. ಸುಮಾರು ಆರು ಗಂಟೆಗಳ ಬಳಿಕ ಈ ಅಪ್ಲಿಕೇಷನ್‌ಗಳು ಮರಳಿ ಸೇವೆ ಆರಂಭಿಸಿದ್ದವು. ಈಗ ಕ್ಲಬ್‌ಹೌಸ್‌ ಡೌನ್‌ ಆಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ರೂಪದಲ್ಲಿ ಕಾಣಿಸಿಕೊಂಡ ಕ್ಲಬ್‌ಹೌಸ್‌, ಮಾತುಗಾರರಿಗೆ ಹೊಸ ಅನುಭವವನ್ನು ನೀಡಿದೆ. ಅಷ್ಟೇ ಪ್ರಮಾಣದಲ್ಲಿ ಕೇಳುಗ ವರ್ಗವನ್ನು ಸೃಷ್ಟಿ ಮಾಡಿದೆ. ನಿತ್ಯವು ಒಂದಲ್ಲ ಒಂದು ಕಾರ್ಯಕ್ರಮವನ್ನು ನಡೆಸುತ್ತಾ ಸಕ್ರಿಯವಾಗಿರುವ ಗ್ರೂಪ್‌ಗಳಿವೆ. ರಾಜಕಾರಣಿಗಳು ನೇರವಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಲೂ ಕ್ಲಬ್‌ಹೌಸ್‌ ವೇದಿಕೆಯಾಗಿ ಗಮನ ಸೆಳೆದಿದೆ. ಕ್ಲಬ್‌ಹೌಸ್‌ ಒಂದು ರೀತಿ ಅಡಿಕ್ಷನ್‌ ಎಂದವರೂ ಇದ್ದಾರೆ.

ಇದನ್ನೂ ಓದಿರಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ಏನಿದು ಕ್ಲಬ್‌ಹೌಸ್?

ಇದೊಂದು ಆಡಿಯೋ ಆಧರಿತ ಸೋಷಿಯಲ್ ಮೀಡಿಯಾ ಆಪ್. ಇಲ್ಲಿ ವಿಡಿಯೋಗಳಿಲ್ಲ. ಸಾಲು ಸಾಲು ಬರಹಗಳಿಲ್ಲ. ಇಲ್ಲಿರುವುದು ಬರೀ ಮಾತು. ಇದೊಂದು ರೀತಿಯ ಪಾಡ್‌ಕಾಸ್ಟ್‌ನ ಲೈವ್ ಆವೃತ್ತಿ ಎನ್ನಬಹುದು. ಸಮಾನ ಆಸಕ್ತಿಯ ವಿಷಯಗಳ ಬಗ್ಗೆ ಒಂದೆಡೆ ಸೇರಿ ಹೇಗೆ ಹರಟೆ ಹೊಡೆಯುತ್ತೇವೊ, ಅದೇ ಅನೌಪಚಾರಿಕತೆಯೊಂದಿಗೆ ಹರಟೆ ಹೊಡೆಯುವುದಕ್ಕೆ ಕ್ಲಬ್‌ಹೌಸ್ ವೇದಿಕೆ ಕಲ್ಪಿಸಿದೆ. ಹೀಗಾಗಿ ಕೋಟ್ಯಂತರ ಜನರನ್ನು ಆಕರ್ಷಿಸಿದೆ.

ಭಾರತೀಯ ಹಿನ್ನೆಲೆಯ ಅಮೆರಿಕನ್ ರೋಹನ್ ಸೇತ್ ಮತ್ತು ಪಾಲ್ ಡೇವಿಸನ್ ಅಭಿವೃದ್ಧಿಪಡಿಸಿದ ಕ್ಲಬ್‌ಹೌಸ್ ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ದಿಢೀರನೆ ಪ್ರಚಾರ ಪಡೆದುಕೊಂಡು ವಿಶ್ವದಾದ್ಯಂತ 1 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿತ್ತು.

ಬಳಕೆದಾರರು ತಮ್ಮದೇ ಆದ ಗುಂಪನ್ನು ಕಟ್ಟಿಕೊಂಡು ಆಸಕ್ತಿಯ ವಿಷಯ ಕುರಿತು ಚರ್ಚಿಸಬಹುದು, ಸಂವಾದ ನಡೆಸಬಹುದು. ಅನಿರ್ಬಂಧಿತವಾದ ಖಾಸಗಿ ಹರಟೆಗೂ ಅವಕಾಶವಿದೆ. ಮುಕ್ತವಾಗಿ ಆಸಕ್ತರೆಲ್ಲರನ್ನೂ ಒಳಗೊಳ್ಳುವುದಕ್ಕೂ ಅವಕಾಶವನ್ನು ಕ್ಲಬ್‌ಹೌಸ್ ನೀಡಿದೆ.

ಜನಪ್ರಿಯವಾಗಿದ್ದೇಕೆ?

ಸೋಷಿಯಲ್ ಮೀಡಿಯಾ ಅಂದರೆ ಅಲ್ಲಿ ಸೆಲ್ಫಿಗಳು, ಫೋಟೊಗಳು, ವಿಡಿಯೋಗಳು, ಉದ್ದುದ್ದ ಬರಹಗಳು.. ಅವುಗಳಿಗೆ ಬರುವ ಲೈಕ್, ಕಮೆಂಟ್‌ಗಳು, ಶೇರ್‌ಗಳು…

ಮನಸ್ಸಿನ ಮೇಲೆ ತೀವ್ರ ಪರಿಣಾಮ ಉಂಟುಮಾಡುವ ಈ ಹಲವು ಸೋಷಿಯಲ್ ಮೀಡಿಯಾ ಚಟುವಟಿಕೆಗಳಿಂದ ರೋಸಿದ ಕಾರಣಕ್ಕೊ ಏನೋ, ಕೇವಲ ಧ್ವನಿಯನ್ನಷ್ಟೇ ಆಧರಿಸಿದ ಕ್ಲಬ್‌ಹೌಸ್ ಜನಪ್ರಿಯವಾಗುತ್ತಿದೆ.

ಎಷ್ಟರಮಟ್ಟಿಗೆ ಎಂದರೆ ಇಲ್ಲಿ ತರುಣ-ತರುಣಿಯರಿದ್ದಾರೆ, ಮಹಿಳೆಯರಿದ್ದಾರೆ, ಉದ್ಯಮಿಗಳು, ಪತ್ರಕರ್ತರು, ಹೊಸ ಹಾಗೂ ಹಳೆಯ ತಲೆಮಾರಿನ ರಾಜಕಾರಣಿಗಳೂ ತೊಡಗಿಸಿಕೊಂಡಿದ್ದಾರೆ. ತರಹೇವಾರಿ ವಿಷಯಗಳ ಕುರಿತು ಸೀಮಿತ ಅವಧಿಯ ಚರ್ಚೆಗಳು ನಡೆಯುತ್ತವೆ. ಅಲ್ಲಿಗೆ ಒಂದು ಸಭೆ ಮುಗಿದುಹೋಗುತ್ತದೆ.

ಯಾರು ಬೇಕಾದರೂ ಇಂತಹ ಚರ್ಚೆಗಳನ್ನು ನಡೆಸಬಹುದು, ಯಾರೂ ಬೇಕಾದರೂ ಪಾಲ್ಗೊಳ್ಳಬಹುದು. ವಿವಿಧ ಹಿನ್ನೆಲೆಯ ಅನುಭವವುಳ್ಳವರೊಂದಿಗೆ ನೇರ ಸಂವಾದ ಚರ್ಚೆಗಳು ಸಾಧ್ಯವಾಗುವುದರಿಂದ
ವಸ್ತು-ವಿಷಯಗಳ ವಿವಿಧ ಆಯಾಮಗಳ ದೃಷ್ಟಿಕೋನವನ್ನು ಪಡೆಯುವುದಕ್ಕೂ ಕ್ಲಬ್‌ಹೌಸ್ ಅವಕಾಶ ಕೊಡುತ್ತದೆ ಎಂಬುದು ಬಳಕೆದಾರರ ಅಭಿಪ್ರಾಯ.

ಕೆಲವೇ ತಿಂಗಳ ಹಿಂದೆ ಭಾರತದಲ್ಲಿ ಚಾಲ್ತಿಗೆ ಬಂದ ಕ್ಲಬ್‌ಹೌಸ್‌ ಸ್ಮಾರ್ಟ್‌‌ಫೋನ್‌ ಬಳಕೆಗೂ ಲಭ್ಯವಾಗಿ ಅಪಾರ ಜನಮೆಚ್ಚುಗೆ ಗಳಿಸಿದೆ. ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿರುವುದು ಕ್ಲಬ್‌ಹೌಸ್‌ ಪ್ರಿಯರಿಗೆ ಬೇಸರ ತಂದಿದೆ.


ಇದನ್ನೂ ಓದಿರಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...