Homeಕರ್ನಾಟಕಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

‘ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ’ ಎಂದು ದುರಹಂಕಾರ ಮೆರೆದ ಕೆಎಫ್‌ಸಿ; ಆರೋಪ

- Advertisement -
- Advertisement -

ಕೆಎಫ್‌ಸಿ ಸಂಸ್ಥೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ ಅಭಿಯಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಂಗಳವಾರ ಹುಬ್ಬಳ್ಳಿಯ ಕೆಎಫ್‌ಸಿ ಮಳಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಿಗ್ಬಂಧನ ಹೂಡಿದರು.

ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ, ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ್ ಹಳವದ ಅವರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳು ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ, ಅಲ್ಲಿನ ಸಿಬ್ಬಂದಿಗೆ ಕನ್ನಡದ ಪಾಠ ಹೇಳಿದರು.

ಕೆಎಫ್‌ಸಿ ಮಳಿಗೆಗಳಲ್ಲಿ ಸಂಪೂರ್ಣ ಕನ್ನಡವನ್ನೇ ಬಳಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಎಲ್ಲ ನಾಮಫಲಕಗಳೂ ಕನ್ನಡದಲ್ಲಿ ಇರಬೇಕು, ಕನ್ನಡದ ಹಾಡುಗಳನ್ನು ಹಾಕಬೇಕು. ಇದಕ್ಕಾಗಿ ಒಂದು ವಾರದ ಗಡುವು ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವಕ್ಕೆ ಮುನ್ನ ಕೆಎಫ್‌ಸಿ ಕನ್ನಡೀಕರಣವಾಗಬೇಕು. ಬೆಂಗಳೂರಿನ ಇಂದಿರಾನಗರ ಕೆಎಫ್‌ಸಿ ಮಾಲ್‌ನಲ್ಲಿ ಕನ್ನಡಿಗರ ವಿರುದ್ಧ ಮಾತಾಡಿದ್ದಕ್ಕೆ ಸಂಸ್ಥೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆಗ ಆಗುವ ಅನಾಹುತಗಳಿಗೆ ಕೆಎಫ್‌ಸಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕರವೇ ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ ಹಳವದ ಎಚ್ಚರಿಕೆ ನೀಡಿದರು.

ಕನ್ನಡವನ್ನು ಅಪಮಾನಿಸಿದ ಕೆಎಫ್‌ಸಿ ವಿರುದ್ಧ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಭಾನುವಾರ #RejectKFC #KFCಕನ್ನಡಬೇಕು ಎಂಬ ಹ್ಯಾಶ್ ಟ್ಯಾಗ್‌ಗಳು ರಾಷ್ಟ್ರಮಟ್ಟದಲ್ಲಿ ಟ್ರೆಂಡ್ ಆಗಿದ್ದವು. ಸೋಮವಾರ ದಾವಣಗೆರೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡರ ನೇತೃತ್ವದಲ್ಲಿ ಕೆಎಫ್‌ಸಿ ಮುಂಭಾಗ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿರಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಂಗಳವಾರ ಕರವೇ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಹುಬ್ಬಳ್ಳಿ ಗೋಕುಲ ರೋಡ್ ಕೆ.ಎಫ್.ಸಿ ಮಳಿಗೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಕರವೇ ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ಕರವೇ ರಾಜ್ಯ ಪದವೀಧರ ಘಟಕದ ಕಾರ್ಯದರ್ಶಿ ಪ್ರಭುಗೌಡ ಸಖ್ಯಾಗೌಡಶಾನಿ, ಯುವ ಘಟಕ ಜಿಲ್ಲಾ ಧ್ಯಕ್ಷರಾದ ಸಾಗರ್ ಗಾಯಕವಾಡ, ರೈತ ಘಟಕ ಜಿಲ್ಲಾಧ್ಯಕ್ಷರಾದ ಪಾಪು ಧಾರೆ, ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಗುರಪ್ಪ ಹಳ್ಯಾಳ, ಹುಬ್ಬಳ್ಳಿ ತಾಲೂಕ ಯುವ ಘಟಕ ಅಧ್ಯಕ್ಷರಾದ ಗಂಗು ಪಾಟೀಲ್, ಧಾರವಾಡ ನಗರ ಘಟಕ ಅಧ್ಯಕ್ಷರಾದ ಮಲಿಕರೀಯಾಜ ಕಂಬಾರಗಣವಿ, ಧಾರವಾಡ ತಾಲ್ಲೂಕ ಉಪಾಧ್ಯಕ್ಷರಾದ ಕಲ್ಮೇಶ ಸಾಲಿ ಇನ್ನಿತರರು ಪಾಲ್ಗೊಂಡರು.

ಕೆಎಫ್‌ಸಿ ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ

“ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ದುರಹಂಕಾರ ಮೆರೆದ ಕೆಎಫ್‌ಸಿ ಸಂಸ್ಥೆ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ #RejectKFC ಅಭಿಯಾನಕ್ಕೆ ತಮಿಳುನಾಡಿನ ತಮಿಳು ಭಾಷಿಕರು ಭಾರಿ‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ತಮಿಳರು ಭಾನುವಾರದಿಂದ #RejectKFC ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡುತ್ತಿದ್ದು, ಕೆಎಫ್‌‌ಸಿಯಂಥ ಸಂಸ್ಥೆಗಳು ಆಯಾ ರಾಜ್ಯದ ಭಾಷೆ, ಸಂಸ್ಕೃತಿಯನ್ನು ಗೌರವಿಸಬೇಕು, ಇಲ್ಲವಾದಲ್ಲಿ ಅಂಥವುಗಳನ್ನು ನಾವೇ ಧಿಕ್ಕರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಕನ್ನಡಿಗರ ಹೋರಾಟಕ್ಕೆ ಬೆಂಬಲ‌ ನೀಡುತ್ತಿದ್ದಾರೆ.

ಸಣ್ಣಪುಟ್ಟ ವಿಷಯಗಳಿಗೆ ಸ್ಪಂದಿಸಿ ಉತ್ತರ ನೀಡುವ ಕೆಎಫ್‌ಸಿ, ಇದುವರೆಗೆ ಕನ್ನಡಿಗರ ಅಭಿಯಾನದ ಕುರಿತು ಮಾತನಾಡದೇ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಈಗಾಗಲೇ ಒಂದು‌ವಾರದ ಗಡುವು ನೀಡಿದ್ದು, ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಂಗಳೂರಿನ ರಾಜಾಜಿನಗರದ ಕೆಎಫ್‌ಸಿ ಮಳಿಗೆಗೆ ಕರವೇ ಬೆಂಗಳೂರು ನಗರ ಉಪಾಧ್ಯಕ್ಷ ಕೆ.ಪಿ.ನರಸಿಂಹ ಅವರ ನೇತೃತ್ವದ ತಂಡ ಭೇಟಿ ನೀಡಿ, ಅಲ್ಲಿನ‌ ಮೇಲ್ವಿಚಾರಕರಿಗೆ ಎಚ್ಚರಿಕೆಯ ಪತ್ರ ನೀಡಿತು.

ವಾರದ ಒಳಗೆ ಕೆಎಫ್‌ಸಿ ನಾಮಫಲಕಗಳು ಕನ್ನಡೀಕರಣಗೊಳ್ಳಬೇಕು, ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು, ಇಲ್ಲವಾದಲ್ಲಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗುತ್ತೀರಿ ಎಂದು ಕೆ.ಪಿ.ನರಸಿಂಹ ಎಚ್ಚರಿಸಿದರು.

ಕರವೇ ರಾಜಾಜಿನಗರ ಕ್ಷೇತ್ರ ಅಧ್ಯಕ್ಷರಾದ ಮಂಜುನಾಥ್, ಬಸವೇಶ್ವರನಗರ ಕ್ಷೇತ್ರ ಅಧ್ಯಕ್ಷರಾದ ಸಿದ್ಧರಾಜು, ಪ್ರಕಾಶನಗರ ವಾರ್ಡ್ ಉಪಾಧ್ಯಕ್ಷ ರವಿ, ಮುಖಂಡರಾದ ಗಂಗಣ್ಣ, ನಿರ್ಮೋಹ, ಲಕ್ಷ್ಮಿನಾರಾಯಣಪುರ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...