Homeಕರ್ನಾಟಕದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯ ಸರ್ಕಾರವು ನವೆಂಬರ್ 5 ರ ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ‘ಗೋ ಪೂಜೆ’ ಮಾಡಲು ಆದೇಶಿಸಿದೆ. ಹಿಂದೂ ಪಂಚಾಂಗದ ಪ್ರಕಾರ ‘ಗೋಧೂಳಿ ಲಗ್ನ’ದ ಶುಭ ಮುಹೂರ್ತದಲ್ಲಿ ಬರುವ ‘ಬಲಿಪಾಡ್ಯಮಿ’ಯಂದು ಸಂಜೆ 5:30 ರಿಂದ 6:30 ರವರೆಗೆ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ನಡೆಸುವಂತೆ ದತ್ತಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಿಗೆ ಆದೇಶವು ನಿರ್ದೇಶಿಸುತ್ತದೆ.

ಆದೇಶದ ಪ್ರಕಾರ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಹಸುಗಳಿಗೆ ಸ್ನಾನ ಮಾಡಿಸಿ, ಹೂವುಗಳಿಂದ ಅಲಂಕರಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿ ಬಾಳೆಹಣ್ಣು, ಬೆಲ್ಲ, ಸಿಹಿತಿಂಡಿಗಳು ಮತ್ತು ಇತರ ಭಕ್ಷ್ಯಗಳನ್ನು ಅರ್ಪಿಸಿ ಪೂಜೆ ನಡೆಸಬೇಕಾಗಿದೆ.

ಇದನ್ನೂ ಓದಿ: ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಸುತ್ತೋಲೆಯಲ್ಲಿ ದೇವಾಲಯಗಳಲ್ಲಿ ‘ಗೋ ಪೂಜೆ’ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಇಲಾಖೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವರ್ಷದಿಂದ ದೀಪಾವಳಿ ಸಂದರ್ಭದಲ್ಲಿ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಯಿಯೊಂದಿಗೆ ಬಿಜೆಪಿ ನಾಯಕನ ಫೋಟೊ ಕೊಲಾಜ್ ಹಂಚಿಕೊಂಡ ಮಾಜಿ ರಾಜ್ಯಪಾಲ!

“ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದೆ. ಶ್ರೀಮದ್‌ ಭಗವದ್ಗೀತೆ, ಭಾಗವತ ಮಹಾಪುರಾಣ, ಮುಂತಾದ ಪುರಾಣಗಳಲ್ಲಿ ಗೋವುಗಳ ಮಹತ್ವಗಳ ಬಗ್ಗೆ ಉಲ್ಲೇಖಿಸಿರುವುದನ್ನು ಕಾಣುತ್ತೇವೆ. ಹಾಗೆಯೇ; ಅನಾದಿಕಾಲದಿಂದಲೂ ಹಿಂದೂ ಧರ್ಮದವರು ಭಾರತ ದೇಶದಲ್ಲಿ ಗೋಮಾತೆಯನ್ನು ಕಾಲ ಕಾಲಕ್ಕೆ ಅನುಗುಣವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ” ಎಂದು ಆದೇಶವು ಹೇಳುತ್ತದೆ.

“ಹಿಂದೂಗಳು ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೊವೂಗಳಿಗೆ ಸ್ನಾನ ಮಾಡಿಸಿ ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ. ಸಿಹಿ ತಿನಿಸುಗಳನ್ನು ನೀಡಿ /ಕೊಟ್ಟು ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಸಹ ಗೋಷೂಜೆಯನ್ನು /ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ” ಎಂದು ಅದು ತಿಳಿಸಿದೆ.

“ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರಗಳಲ್ಲಿ ವಾಸಿಸುವ ಜನರು ಗೋಪೂಜೆಯನ್ನು ಮರೆತು ಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆಯೆಂದು ತಿಳಿದು ಪೂಜಿಸುವ ಸಂಪ್ರದಾಯ/ ಪದ್ದತಿ ಬಿಡಬಾರದೆಂಬ ದೃಷ್ಠಿಯಿಂದ, ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಿ ಸತ್ಸಂಪ್ರದಾಯ ಮುಂದುವರೆಸುವ ದೃಷ್ಠಿಯಿಂದ ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ /ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ, ಸನಾತನ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು, ಸಂಪ್ರಾದಾಯವನ್ನು ಉಳಿಸಿ, ಬೆಳಸುವ ನಿಟ್ಟಿನಲ್ಲಿ ದೀಪಾವಳಿಯ /ಬಲಿಪಾಡ್ಯಮಿಯ ಹಬ್ಬದ ದಿನದಂದು ‘ಗೋ ಪೂಜೆ’ ನೆಡೆಸಿ ಜಾರಿಗೊಳಿಸುವುದು ಸೂಕ್ತವು, ಶಾಸ್ತ್ರ ಸಮೃತವು ಆಗಿರುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...