Homeಮುಖಪುಟತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ

- Advertisement -
- Advertisement -

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.

“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ತ್ರಿಪುರಾ: ಸಂಸದ ಅಭಿಷೇಕ್ ಬ್ಯಾನರ್ಜಿ ಸೇರಿ ಹಲವು ಟಿಎಂಸಿ ನಾಯಕರ ವಿರುದ್ಧ ಎಫ್‌ಐಆರ್‌

ಧ್ವಂಸ ಮಾಡಿರುವ ಮನೆಗಳು ಮತ್ತು ಸುಟ್ಟು ಕರಕಲಾದ ಅಂಗಡಿಗಳು ಅಲ್ಪಸಂಖ್ಯಾತ ಸಮುದಾಯದವರಿಗೆ ಸೇರಿದ್ದು, ಅವರಲ್ಲಿ ಒಬ್ಬರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಡುವುದನ್ನು ತಪ್ಪಿಸಲು ಸುತ್ತಮುತ್ತಲಿನ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿಪಿಐಎಂ ರಾಜ್ಯ ನಾಯಕ ಪಬಿತ್ರಾ ಕರ್ ಮಾತನಾಡಿ, “ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆದ ನಂತರ ತ್ರಿಪುರಾದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಇದನ್ನು ಬಿಜೆಪಿಯವರು ರೂಪಿಸುತ್ತಿದ್ದಾರೆ. ತ್ರಿಪುರ ಕೋಮು ಶಾಂತಿ ಮತ್ತು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಇಲ್ಲಿ ಕೋಮು ಸೌಹಾರ್ದತೆ ಮತ್ತು ಶಾಂತಿ ಕಾಪಾಡುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿಯನ್ನು ಸಂಘಟಿಸುತ್ತೇವೆ: ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ನಾನ

ಬಿಜೆಪಿ ವಕ್ತಾರ ನಬೆಂದು ಭಟ್ಟಾಚಾರ್ಯ ಅವರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಆದರೆ ಪೊಲೀಸರು ಅಗತ್ಯ ಕ್ರಮ ತೆಗೆದು ಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

“ವಿಎಚ್‌ಪಿ ಇಂದು ಪಾಣಿಸಾಗರ್ ಪ್ರದೇಶದಲ್ಲಿ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ನಾವು ಪಾಣಿಸಾಗರ ಮೋಟಾರು ಸ್ಟ್ಯಾಂಡ್‌ನಲ್ಲಿ ಜಮಾಯಿಸಿ, ಚಾಮಟಿಲ್ಲಾ, ರೋವಾ, ಜಲೇಬಾಷಾ ಸೇರಿದಂತೆ ವಿವಿಧ ಪ್ರದೇಶಗಳ ಮೂಲಕ ನಡೆದು ಪ್ರಾರಂಭದ ಹಂತಕ್ಕೆ ಹಿಂತಿರುಗಲು ನಿರ್ಧರಿಸಿದ್ದೇವೆ. ನಾವು ರೋವಾ ಬಳಿ ಬಂದಾಗ ಮಸೀದಿಯ ಮುಂದೆ ನಿಂತಿದ್ದ ಕೆಲವು ಯುವಕರು ನಮ್ಮನ್ನು ನಿಂದಿಸಿದ್ದಾರೆ. ಅವರು ಖಡ್ಗ ಮತ್ತು ಇತರ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು. ಅವರು ಪಾಕಿಸ್ತಾನ್ ಜಿಂದಾಬಾದ್ ಮತ್ತು ಧಾರ್ಮಿಕ ಘೋಷಣೆಗಳನ್ನು ಕೂಗಿದ್ದು, ಅವರ ಪ್ರಚೋದನೆಯಿಂದಾಗಿ ಕೆಲವು ವಿರಳ ಘಟನೆಗಳು ಸಂಭವಿಸಿವೆ” ಎಂದು ರ್‍ಯಾಲಿಯಲ್ಲಿ ಭಾಗವಹಿಸಿದ್ದ ಪಾಣಿಸಾಗರದ ಬಜರಂಗದಳದ ನಾಯಕ ನಾರಾಯಣ್ ದಾಸ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಕಳೆದ ಶುಕ್ರವಾರ, ತ್ರಿಪುರಾ ರಾಜ್ಯ ಜಮಿಯತ್ ಉಲಮಾ (ಹಿಂದ್) ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರ ಕಚೇರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದು, ಕಳೆದ ಮೂರು ದಿನಗಳಲ್ಲಿ ಮಸೀದಿಗಳು ಮತ್ತು ಅಲ್ಪಸಂಖ್ಯಾತರ ವಸತಿಗಳ ಮೇಲೆ ದಾಳಿಗಳು ನಡೆದಿವೆ ಎಂದು ಆರೋಪಿಸಿದೆ.

ಇದನ್ನೂ ಓದಿ: ತಲೆ ಬೋಳಿಸಿಕೊಂಡು ಪಶ್ಚಾತಾಪ ಪಟ್ಟು ಬಿಜೆಪಿ ತೊರೆಯಲು ಸಿದ್ದರಾದ ತ್ರಿಪುರ ಶಾಸಕ- ಟಿಎಂಸಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. *ನಾನೊಬ್ಬ ಹಿಂದುವಾಗಿ ನಾಚಿಕೆಪಡುತ್ತಿದ್ದೇನೆ..!!*

    ಒಂದಾನೊಂದು ಕಾಲದಲ್ಲಿ ಹಿಂದೂ ಮುಸ್ಲಿಂ ಐಕ್ಯತೆ ಹಾಗೂ ಸೌಹಾರ್ದತೆಯ ವಿಷಯದಲ್ಲಿ ಭಾರತ ದೇಶ ಇಡೀ ವಿಶ್ವಕ್ಕೆ ಮಾದರಿಯಾಗಿತ್ತು.

    ಆ ಕಾರಣದಿಂದಲೇ ಭಾರತವನ್ನು ಯಾರಿಗೂ ಸೋಲಿಸಲಾಗಲಿಲ್ಲ.
    ಬ್ರಿಟಿಷರು ಭಾರತ ಬಿಟ್ಟು ತೊಲಗಳು ಅದುವೇ ವಜ್ರಾಯುಧವಾಗಿತ್ತು.

    ನಮ್ಮ ಸಣ್ಣಪ್ರಾಯದಲ್ಲಿ ಮುಸ್ಲಿಮರೊಂದಿಗೆ ಎಷ್ಟು ಅನ್ಯೋನ್ಯವಾಗಿದ್ದೆವೆಂದರೆ ನಮ್ಮ ಮನೆಯಲ್ಲಿ ಯಾವುದೇ ಸ್ಪೆಶಲ್ ಅನ್ನ ಪದಾರ್ಥ ಮಾಡಿದರೂ ಅವರಿಗೆ ಹಂಚಿ ತಿನ್ನುತ್ತಿದ್ದೆವು ಅದೇ ರೀತಿ ಅವರ ಮನೆಯಲ್ಲಿ ಏನೇ ಗಮ್ಮತ್ತು ಮಾಡಿದರೂ ನಮಗೆ ತಂದು ಕೊಡುತ್ತಿದ್ದರು.

    ನಮ್ಮ ಸುಖಃ ದುಖಃ ಗಳಲ್ಲಿ ಅವರು ಭಾಗಿಯಾಗುತ್ತಿದ್ದರು ಅವರ ಸಂತೋಷ ಸಂತಾಪಗಳಲ್ಲಿ ನಾವೂ ಭಾಗಿಯಾಗುತ್ತಿದ್ದೆವು.

    ನಮಗೇನಾದರೂ ಅಪಾಯ ಎದುರಾದರೆ ಪರಿಹಾರಕ್ಕಾಗಿ ಅವರ ಮೊರೆಹೋಗುತ್ತಿದ್ದೆವು.
    ಅವರ ಎಲ್ಲ ಒತ್ತಡಗಳನ್ನು ಬದಿಗಿಟ್ಟು ನಮಗೆ ನೆರವಾಗುತ್ತಿದ್ದರು.

    ಅವರಿಗೇನಾದರೂ ತೊಂದರೆಯನುಭವಿಸಿದರೆ ನಮ್ಮ ನೆರವನ್ನೂ ಪಡೆಯುತ್ತಿದ್ದರು.

    ನಮ್ಮ ಗೆಳೆಯರಲ್ಲಿ ಬಹುತೇಕ ಮಂದಿಯೂ ಮುಸಲ್ಮಾನರಾಗಿದ್ದರು.
    ಅಂದು ಬೇದಬಾವ ಎಂಬ ಮಾತೇ ಅಪ್ರಸ್ತುತವಾಗಿತ್ತು.

    ಇಂದು ಅದೆಲ್ಲ ಕನಸಿನಮಾತೇ ಆಗಿಬಿಟ್ಟಿದೆ.
    ನಮ್ಮೆಡೆಯಲ್ಲಿ ಆರೆಸ್ಸೆಸ್, ಶ್ರೀರಾಮಸೇನೆ, ಭಜರಂಗದಳ, ಮುಂತಾದ ಸಂಘಟನೆ ಹುಟ್ಟುಹಾಕಿ ವಿನಾಕಾರಣ ಮುಸ್ಲಿಮರ ವಿರುದ್ದ ಸಮರ ಸಾರಿದಾಗ…
    ಅವರ ಸಮುದಾಯದೊಳಗೂ ಬಿಸಿ ರಕ್ತ ಸಂಚರಿಸುವ ಯುವಕರು ಸೇರಿಕೊಂಡು ಕೆ.ಎಫ್.ಡಿ, ಪಿ.ಎಫ್.ಐ, ಎಸ್.ಡಿ.ಪಿ.ಐ ಹೆಸರಿನಲ್ಲಿ ಪರ್ಯಾಯ ಸಂಘಟನೆ ಹುಟ್ಟುಹಾಕಿ ನಮ್ಮ ಮೂಲಭೂತವಾದಿಗಳಿಗೆ ಸಡ್ಡುಹೊಡೆದು ನಿಲ್ಲಲು ಅವಕಾಶವನ್ನು ಮಾಡಿಕೊಟ್ಟೆವು.

    ನಮ್ಮ ಕೋಮು ಪ್ರಚೋದನಕಾರಿ ಭಾಷಣ, ಕ್ರಿಯೆಗಳಿಂದ ಅವರಿಗೆ ಅನಿವಾರ್ಯವಾಗಿ ಅಂತಹ ಸಂಘಟನೆ ಪ್ರಾರಂಭಿಸುವುದು ಅನಿವಾರ್ಯವಾಗಿಬಿಟ್ಟಿದೆ.

    ಅವರ ಸಂಘಟನೆಗೆ ಅವರದೇ ಧರ್ಮದಲ್ಲಿ ಬಹುತೇಕಮಂದಿಯ ವಿರೋಧವಿದ್ದರೂ ನಮ್ಮಲ್ಲಿರುವ ಕೋಮುವಾದಿಗಳನ್ನು ಮಟ್ಟಹಾಕಲು ತೊಡೆತಟ್ಟಿ ನಿಂತಿರುವುದು ಅವರ ಧೈರ್ಯವನ್ನು ಎತ್ತಿ ತೋರಿಸುತ್ತಿದೆ.
    ವಿಪರ್ಯಾಸವೆಂದರೆ ನಮ್ಮ ತೀವ್ರವಾದಿ ಸಂಘಟನೆಯ ಕಾರ್ಯಕರ್ತರು ಬಹುತೇಕ ಮುಸಲ್ಮಾನರನ್ನು ಕೊಂದಿದ್ದರೂ ಮುಸಲ್ಮಾನರಲ್ಲಿ ದಾರಿಹೋಕರಾದ ಶ್ರೀ ಸಾಮಾನ್ಯ ವ್ಯಕ್ತಿಗಳನ್ನಷ್ಟೇ ಕೊಂದಿರಬಹುದು ಆದರೆ ಅವರು ಹಾಗಲ್ಲ…
    ಸಿಕ್ಕ ಸಿಕ್ಕ ಹಿಂದುಗಳನ್ನು ಹಿಡಿದು ಹತ್ಯೆಗೈಯ್ಯುವುದು ಸಾಧ್ಯವಾದರೂ ಅದವರು ಈ ತನಕ ಮಾಡಿಲ್ಲ.
    ಹೊರತು ಕೋಮುವಾದಿ ಹಿಂದುಗಳ ನಾಯಕರೇ ಅವರ ಗುರಿ…
    ಅದನ್ನು ಅವರು ಮಾಡಿಯೂ ತೋರಿಸಿದ್ದಾರೆ.

    ಮುಸಲ್ಮಾನರನ್ನು ದೇಶದಿಂದ ಹೊರದಟ್ಟುವುದು ಸುಲಭದ ಮಾತಲ್ಲ.
    ಪವಿತ್ರ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾರ್ಪಡಿಸುವುದೂ ಹೇಳಿದಂತೆ ಅಷ್ಟು ಸುಲಭದ ಕಾರ್ಯವೂ ಅಲ್ಲ.

    ಹಿಂದುಗಳಲ್ಲಿ ಬಹುತೇಕಮಂದಿಯೂ ಮುಸಲ್ಮಾನರೊಂದಿಗೆ ಮಮತೆಯಿಂದಿರಲು ಬಯಸುವಂತೆ ಮುಸಲ್ಮಾನರಲ್ಲೂ ದೊಡ್ಡ ಒಂದು ಗುಂಪು ಹಿಂದುಗಳೊಂದಿಗೆ ಸೌಹಾರ್ದಯುತವಾಗಿ ಬಾಳುವುದನ್ನೇ ಇಷ್ಟಪಡುತ್ತಾರೆ.

    ಭೂಲೋಕದಲ್ಲಿ ಇರುವ ತಾತ್ಕಾಲಿಕ ಜೀವನ ಅದು ಶಾಂತಿ ಸೌಹಾರ್ದತೆಯೊಂದಿಗೆ ಹಿಂದೂ ಮುಸಲ್ಮಾನರು ಅನ್ಯೋನ್ಯತೆ ಸಹಬಾಳ್ವೆಯಾಗಿ ನಡೆಸುವುದಲ್ಲವೇ ಬುದ್ದಿವಂತಿಕೆ.
    ನಮ್ಮಲ್ಲೂ ಅವರಲ್ಲೂ ಪ್ರಚೋಧನಕಾರಿ ಭಾಷಣ ಬಿಗಿದು ನಮ್ಮೆಡೆಯಲ್ಲಿ ಕಂದಕ ಸೃಷ್ಟಿಸಿ ಕೋಮುಬಾವನೆ ಮೂಡಿಸಿ ಕಚ್ಚಾಡುವಂತೆ ಮಾಡಿದ ಅದೆಷ್ಟೋ ನಾಯಕರು ಇದೀಗ ಮಣ್ಣಾಗಿಹೋಗಿದ್ದಾರೆ.
    ನಾವೂ ಕೂಡಾ ಅದೇ ದಾರಿ ತುಳಿಯುವವರೇ ಆಗಿದ್ದೇವೆ.
    ಅದೆರೆಡೆಯಲ್ಲಿ ಭಾರತ ಹಿಂದೂ ರಾಷ್ಟ್ರವಾಗಿ ನಮಗೇನು ಲಾಭವಿದೆ.

    ಶಾಂತಿ ಸೌಹಾರ್ದತೆಯೊಂದಿಗೆ ಬಾಳಿ ಬದುಕಿ ಬೇರೆಯವರಿಗೆ ಉಪಕಾರಮಾಡಲಾಗದಿದ್ದರೂ ನಮ್ಮಿಂದಾಗಿ ಯಾರೂ ತೊಂದರೆ ಅನುಭವಿಸಬಾರದೆಂಬ ವಿಶಾಲಹೃದಯದ ಸನ್ಮನಸ್ಸಿನಿಂದ ಜೀವನ ಸಾಗಿಸಿ ಸಂತೋಷದೊಂದಿಗೆ ಕಣ್ಣುಮುಚ್ಚುವುದಾದರೆ ಅದಲ್ಲವೇ ಒಳಿತು.
    ಚಿಂತಿಸುವವರಿಗೆ ಇದರಲ್ಲಿ ಪಾಠವಿದೆ.

    *ಸುನಿಲ್ ಬೋಂದೆಲ್, ಮಂಗಳೂರು*

  2. Musalmaanara antarangavannu bahirangavaagi tili padisiruva sunil ravarige dhanyavaadagalu,
    Nimmantaha bahuteka hindu sahodararu namma deshaddalli iruvatanaka e alpa budhiya alpa dushtarinda hedaruva avashyakate illa ,aadare ivarannu naavella seri vaggatagi tadeyaddidare desha ashaanti haagu aunnati kadege saagabahudu, dushtarinda bhaaratavannu rakshisalendu prarthisona,
    “Mera bharath mahaan”

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...