Homeಮುಖಪುಟಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ತಜ್ಞರ ಸಮಿತಿಯನ್ನು ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿಯು ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ನ್ಯಾಯಾಲಯದ ಮುಂದೆ ವರದಿ ಸಲ್ಲಿಸುವಂತೆ ಕೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ಈ ಕುರಿತು ನಡೆಯುತ್ತಿರುವ ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತಜ್ಞರ ಸಮಿತಿಯನ್ನು ನೇಮಿಸಲಾಗುತ್ತದೆ” ಎಂದು ಸುಪ್ರೀಂಕೋರ್ಟ್ ಪೀಠ ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಜೊತೆಗೆ ಈ ಆರೋಪಗಳ ಸ್ವರೂಪ ನೋಡಿದರೆ ಇದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ತಿಳಿಸುತ್ತದೆ ಎಂದು ಹೇಳಿದೆ.

“ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ಸ್ವತಂತ್ರ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಅನೇಕ ಮನವಿಗಳನ್ನು  ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಸರ್ಕಾರವು ಇಸ್ರೇಲಿ ಸಾಫ್ಟ್‌ವೇರ್ ಪೆಗಾಸಸ್ ಅನ್ನು ಬಳಸುತ್ತಿದೆ ಎಂದು ಆರೋಪಿಸಿರುವ ವರದಿಗಳ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸುವ ಉದ್ದೇಶವಿದೆ ಎಂದು ಪೀಠವು ಸೆಪ್ಟಂಬರ್ 23 ರಂದು ಹೇಳಿತ್ತು.

“ಕಳೆದ ವಾರವೇ ಪೆಗಾಸಸ್ ತನಿಖಾ ಸಮಿತಿ ಕುರಿತು ಆದೇಶ ಹೊರಡಿಸಲು ಬಯಸಿದ್ದೆವು. ಆದರೆ ನಾವು ಪರಿಗಣಿಸಿದ್ದ ಕೆಲವು ಸದಸ್ಯರು ವೈಯಕ್ತಿಕ ಕಾರಣಗಳಿಂದಾಗಿ ಈ ಸಮಿತಿಯ ಭಾಗವಾಗಿರಲು ನಿರಾಕರಿಸಿದರು. ಆದ್ದರಿಂದ ವಿಳಂಬವಾಗಿದೆ. ನಾವು ಮುಂದಿನ ವಾರ ಆದೇಶ ರವಾನಿಸಲು ಪ್ರಯತ್ನಿಸುತ್ತೇವೆ” ಎಂದು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಸೆಪ್ಟಂಬರ್ 23 ರಂದು ಹೇಳಿದ್ದರು.

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೆಪ್ಟಂಬರ್ 13 ರಂದು ಹೇಳಿದೆ.


ಇದನ್ನೂ ಓದಿ: ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...