Homeಮುಖಪುಟಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

ಡ್ರಗ್ಸ್ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡದಂತೆ ಸಚಿವ ನವಾಬ್ ಮಲಿಕ್ ವಿರುದ್ಧ ಪಿಐಎಲ್

- Advertisement -
- Advertisement -

ಮುಂಬೈನ ಕ್ರೂಸ್ ಶಿಪ್ ಡ್ರಗ್ಸ್‌ ಪ್ರಕರಣದಲ್ಲಿ ಸತತವಾಗಿ ಎನ್‌ಸಿಬಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಪ್ರಕರಣವೇ ನಕಲಿ ಎಂದು ಹೇಳಿರುವ ಸಚಿವ ನವಾಬ್ ಮಲಿಕ್ ವಿರುದ್ಧ ಮಂಗಳವಾರ ಬಾಂಬೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಅಂಧೇರಿ ನಿವಾಸಿ ಮೂಲದ ಉದ್ಯಮಿ ಮತ್ತು ಮೌಲಾನಾ ಕೌಸರ್ ಅಲಿ ಸಯ್ಯದ್ , ಬಾಂಬೆ ಹೈಕೋರ್ಟ್‌ನಲ್ಲಿ ಎನ್‌ಸಿಪಿ ನಾಯಕ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದ್ದಾರೆ. ಕ್ರೂಸ್ ಶಿಪ್ ಡ್ರಗ್ಸ್‌ ಕೇಸ್‌ನಲ್ಲಿ ನಡೆಯುತ್ತಿರುವ ತನಿಖೆಯ ಬಗ್ಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿ ನೀಡದಂತೆ ತಡೆಯಬೇಕೆಂದು ಒತ್ತಾಯಿಸಿದ್ದಾರೆ.

ಕೌಸರ್ ಅಲಿ ಸಯ್ಯದ್ ತಮ್ಮ ವಕೀಲ ಅಶೋಕ್ ಸರೋಗಿ ಅವರ ಮೂಲಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯದ ನಿರ್ದೇಶಕ ಸಮೀರ್ ವಾಂಖೆಡೆ ಅವರು ಭ್ರಷ್ಟ ಅಧಿಕಾರಿಯಲ್ಲ. ಮುಂಬೈನಲ್ಲಿ ಮಾದಕ ದ್ರವ್ಯ ಹಾವಳಿಯನ್ನು ನಿಭಾಯಿಸುವಲ್ಲಿ ಅತ್ಯಂತ ಪರಿಣಾಮಕಾರಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ಸಚಿಬ ನವಾಬ್ ಮಲಿಕ್ ಅವರ ಟ್ವೀಟ್‌ಗಳು ಮತ್ತು ಹೇಳಿಕೆಗಳು, ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮತ್ತು ಅವರ ತಂಡದ ನೈತಿಕತೆಯನ್ನು ಕುಗ್ಗಿಸುತ್ತಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

“ಸಮೀರ್‌ ವಾಂಖೆಡೆ ವಿರುದ್ಧ ಯಾವುದೇ ಆಧಾರ ಇದ್ದರೆ, ವಾಂಖೆಡೆ ಏನಾದರೂ ತಪ್ಪು ಮಾಡಿದ್ದರೆ, ಸಚಿವರಾಗಿರುವ ಮಲಿಕ್ ಅವರು ಕಾನೂನು ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದೆ” ಎಂದು ಪಿಐಎಲ್ ಹೇಳಿದೆ.

ಎನ್‌ಸಿಬಿ ಏಜೆನ್ಸಿಯ ನೈತಿಕತೆಯನ್ನು ಕುಗ್ಗಿಸುವ ಉದ್ದೇಶದಿಂದ ಅಥವಾ ಇತರ ಯಾವುದೇ ತನಿಖಾ ಸಂಸ್ಥೆಯ ಅಧಿಕಾರಿಗಳ ಮೇಲೆ ಹೇಳಿಕೆಗಳು ನೀಡದಂತೆ ಮಲಿಕ್‌ಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ. ಪಿಐಎಲ್‌ನ ವಿಚಾರಣೆಗೆ ಇನ್ನು ದಿನಾಂಕ ನಿಗದಿಯಾಗಿಲ್ಲ.

ಮಂಗಳವಾರ (ಅ.26) ಸಮೀರ್‌ ವಾಂಖೆಡೆ ವಿರುದ್ಧ ಮತ್ತೊಂದು ಆರೋಪ ಮಾಡಿದ್ದ ನವಾಬ್ ಮಲಿಕ್, ವಾಂಖೆಡೆ 26 ಪ್ರಕರಣಗಳಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ ಎಂದು ಏಜೆನ್ಸಿ ಉದ್ಯೋಗಿಯ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

“ಹೆಸರು ಹೇಳಲಿಚ್ಛಿಸದ NCB ಅಧಿಕಾರಿಯಿಂದ ನನಗೆ ಬಂದ ಪತ್ರದ ವಿಷಯಗಳು ಇಲ್ಲಿವೆ.
ಜವಾಬ್ದಾರಿಯುತ ನಾಗರಿಕನಾಗಿ ನಾನು ಈ ಪತ್ರವನ್ನು ಡಿಜಿ ನಾರ್ಕೋಟಿಕ್ಸ್ ಅವರಿಗೆ ರವಾನಿಸುತ್ತೇನೆ, ಈ ಪತ್ರವನ್ನು ಸಮೀರ್ ವಾಂಖೆಡೆ ವಿರುದ್ಧ ನಡೆಸುತ್ತಿರುವ ಆಂತರಿಕೆ ತನಿಖೆಯಲ್ಲಿ ಸೇರಿಸಲು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಸಚಿವ ಮಲಿಕ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ಎನ್‌ಸಿಬಿ ಉಪ ಮಹಾನಿರ್ದೇಶಕ ಮುತಾ ಅಶೋಕ್ ಜೈನ್, ಪತ್ರದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...