Homeಮುಖಪುಟಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

ಪೆಗಾಸಸ್ ಪ್ರಕರಣ: ಸ್ವತಂತ್ರ ತನಿಖೆ ನಡೆಸಲಿರುವ ಸಮಿತಿ ಸದಸ್ಯರು ಇವರು

- Advertisement -
- Advertisement -

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.

ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್‌ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್‌ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.

ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್‌ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.

ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್‌ವರ್ಕ್‌ಗಳು, ಬ್ರಾಡ್‌ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್‌ವರ್ಕ್‌ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.

ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಆರ್‌.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.  ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.

ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.


ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...