15 ವರ್ಷದ ಬಾಲಕನೊಬ್ಬ 23 ವರ್ಷದ ಯುವತಿಯನ್ನು ಬಾಳೆ ತೋಟಕ್ಕೆ ಎಳೆದೊಯ್ದು, ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನಷ ಘಟನೆ ಕೇರಳದ ಕುಂಡೊಟ್ಟಿಯ ಕೂಟ್ಟುಕ್ಕರ ಎಂಬಲ್ಲಿ ಸೋಮವಾರ ನಡೆದಿದೆ.
ಜಿಲ್ಲಾ ಮಟ್ಟದ ಜೂಡೋ ಚಾಂಪಿಯನ್ ಆಗಿರುವ 10 ನೇ ತರಗತಿ ವಿದ್ಯಾರ್ಥಿಯೇ ಆರೋಪಿ ಎಂದು ಯುವತಿ ನೀಡಿದ ವಿವರಣೆ ಮತ್ತು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿತ್ತು. ಮಂಗಳವಾರ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದಾದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ
ಸೋಮವಾರ ಮಧ್ಯಾಹ್ನ 12.45ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ತಾನು ಓದುತ್ತಿರುವ ಕುಂಡೊಟ್ಟಿಯಲ್ಲಿರುವ ಕಂಪ್ಯೂಟರ್ ಸೆಂಟರ್ಗೆ ಹೋಗಲು ತನ್ನ ಮನೆಯಿಂದ ಕೂಟ್ಟುಕ್ಕರ ಜಂಕ್ಷನ್ಗೆ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಯುವತಿಯನ್ನು ಬಾಲಕ ಹಿಂಬಾಲಿಸಿಕೊಂಡು ಹಿಂದಿನಿಂದ ಹಿಡಿದು ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಯತ್ನಿಸಿದ್ದಾನೆ. ಈ ವೇಳೆ ಯುವತಿಯು ವಿರೋಧಿಸಿದಾಗ ಕಲ್ಲಿನಿಂದ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ, ಯುವತಿ ಮೇಲಂಗಿಯನ್ನು ಬಳಸಿ ಕೈಗಳನ್ನು ಕಟ್ಟಿದ್ದಾನೆ.
“ಬಾಲಕ, ತನ್ನ ಮೇಲೆ ದಾಳಿ ಮಾಡಲು ಮತ್ತೊಂದು ಕಲ್ಲನ್ನು ಹುಡುಕುತ್ತಿದ್ದಾಗ, ಯುವತಿ ಅವನ ಹಿಡಿತದಿಂದ ತಪ್ಪಿಕೊಂಡು ಹತ್ತಿರದ ಮನೆಗೆ ಓಡಿಹೋದ್ದಾರೆ. ಮನೆಯವರು ಬಾಲಕನ್ನು ಬೆದರಿಸಿದಾಗ ಆತ ಓಡಿಹೋಗಿದ್ದಾನೆ” ಎಂದು ಕುಂಡೊಟ್ಟಿ ಪುರಸಭೆಯ ಕೂಟ್ಟುಕ್ಕರ ವಾರ್ಡ್ ಕೌನ್ಸಿಲರ್ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!
“ಯುವತಿಯ ಮುಖ ಊದಿಕೊಂಡಿತ್ತು. ದಾಳಿಕೋರ ಯುವತಿಯ ಉಡುಪನ್ನು ಹರಿದು ಹಾಕಿದ್ದ. ಸಂತ್ರಸ್ತ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಕುಂಡೊಟ್ಟಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದೆವು” ಎಂದು ಫಾರೂಕ್ ತಿಳಿಸಿದ್ದಾರೆ.
ಯುವತಿ ಸಾಮಾನ್ಯವಾಗಿ ಕಂಪ್ಯೂಟರ್ ಸೆಂಟರ್ಗೆ ಹೋಗಲು ಜಂಕ್ಷನ್ನಲ್ಲಿ ಬಸ್ ಹತ್ತುತ್ತಾರೆ. ಅವರ ಮನೆಯಿಂದ, ಕೊಟ್ಟುಕ್ಕರ ಜಂಕ್ಷನ್ಗೆ ಹೋಗಲು ಅವರು ಒಂದು ಕಿಲೋಮೀಟರ್ ನಡೆಯಬೇಕು. ಜಂಕ್ಷನ್ ತಲುಪಲು ಅವರು ಸಾಮಾನ್ಯವಾಗಿ ಭತ್ತದ ಗದ್ದೆಗಳ ಮಧ್ಯೆ ಇರುವ ಕಾಲುದಾರಿಯಲ್ಲಿ ಓಡಾಡುತ್ತಾರೆ ಎಂದು ಫಾರೂಪ್ ವಿವರಿಸಿದ್ದಾರೆ.
ದಾಳಿಕೋರ ಹೇಗಿದ್ದ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂತ್ರಸ್ತೆ ವಿವರಿಸಿದ್ದಾರೆ. ಜೊತೆಗೆ ಆತನನ್ನು ಕಂಡರೆ ಗುರುತಿಸಬಹುದು ಮತ್ತು ಮಲಯಾಳಂನಲ್ಲಿ ಮಾತನಾಡಿದ್ದನು. ಅವನನ್ನು ಕೆಲವು ಬಾರಿ ಈ ಪ್ರದೇಶದಲ್ಲಿ ನೋಡಿದ್ದೇನೆ ಎಂದು ತಿಳಿಸಿದ್ದರು.
ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಆತ ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಕೊಂಡೊಟ್ಟಿ ಇನ್ಸ್ಪೆಕ್ಟರ್ ಪ್ರಮೋದ್ ಎಂ ಸಿ ತಿಳಿಸಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ


