Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...