Homeಕರ್ನಾಟಕಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

ಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

- Advertisement -
- Advertisement -

ರಾಜ್ಯದ ಮೃಗಾಲಯಗಳು ಮತ್ತು ಪ್ರಾಣಿ ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ. ರಕ್ಷಣಾ ಕೇಂದ್ರಗಳಲ್ಲಿ ಪ್ರಾಣಿಗಳು ಶಾಶ್ವತ ಖೈದಿಗಳಾಗುವುದನ್ನು ಕಡಿಮೆ ಮಾಡಲು ಸರಿಯಾದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪ್ರಾಣಿ ಸಂರಕ್ಷಣಾಕಾರರು ಒತ್ತಾಯಿಸಿದ್ದಾರೆ.

ಮಾಂಸಾಹಾರಿ ಪ್ರಾಣಿಗಳಿಗೆ ಈ ಪ್ರಾಣಿ ರಕ್ಷಣಾ ಕೇಂದ್ರಗಳಲ್ಲಿ ನೀಡುವ ವಸತಿ ಸೌಕರ್ಯಗಳ ಬಗ್ಗೆ ತಾರತಮ್ಯವಿದೆ. ಹೊರ ಭಾಗಗಳಿಂದ ರಕ್ಷಿಸಲಾಗುವ ಎಲ್ಲಾ ಹುಲಿಗಳನ್ನು ಮೈಸೂರು ರಕ್ಷಣಾ ಕೇಂದ್ರಕ್ಕೆ ಮತ್ತು ಚಿರತೆಗಳನ್ನು ಬನ್ನೇರುಘಟ್ಟಕ್ಕೆ ಕಳುಹಿಸಲಾಗುತ್ತದೆ. ಹೀಗಾಗಿ, ಬನ್ನೇರುಘಟ್ಟ ರಕ್ಷಣಾ ಕೇಂದ್ರದಲ್ಲಿ 35 ಚಿರತೆಗಳಿದ್ದರೆ, ಮೈಸೂರು ರಕ್ಷಣಾ ಕೇಂದ್ರದಲ್ಲಿ ಸುಮಾರು 8 ರಿಂದ 10 ಹುಲಿಗಳಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವೇ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆಯಿಂದ ಮೂರು ಚಿರತೆಗಳನ್ನು ರಕ್ಷಿಸಲಾಗಿದೆ. ಅಕ್ಟೋಬರ್ 21 ರಂದು ಗಾಯಗೊಂಡಿದ್ದ ಹುಲಿಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಮೈಸೂರು ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಮೈಸೂರು ರಕ್ಷಣಾ ಕೇಂದ್ರದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆ ಸಿಕ್ಕ ಗಾಯಗೊಂಡ ಹುಲಿಯನ್ನು ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅನಾಮಧೇಯ ಪಶುವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

“ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ನಿಯಮಗಳ ಪ್ರಕಾರ, ರಕ್ಷಿಸಿದ ಕಾಡು ಪ್ರಾಣಿಗಳನ್ನು ಮೃಗಾಲಯಗಳಲ್ಲಿ ಪ್ರದರ್ಶನಕ್ಕೆ ಇಡುವಂತಿಲ್ಲ. ಅವುಗಳನ್ನು ಬೋನ್‌ಗಳಲ್ಲಿ ಇಟ್ಟರೆ, ಈ ಪ್ರಾಣಿಗಳು ತಮ್ಮ ಜೀವನದುದ್ದಕ್ಕೂ ಕೈದಿಗಳಂತೆ ಸೆರೆಯಲ್ಲಿ ಉಳಿಯುತ್ತವೆ. ರೈತರು ತಮ್ಮ ಭತ್ತ, ಕಬ್ಬು ಮತ್ತು ಇತರ ಗದ್ದೆಗಳಲ್ಲಿ ಚಿರತೆಗಳ ಕೊರಗುತ್ತಿರುವುದನ್ನು ಗಮನಿಸಿದ್ದಾರೆ. ಆದರೆ, ಅವುಗಳನ್ನು ಅವುಗಳ ತಾಯಿ ಬಿಟ್ಟು ಹೋಗಿರಬೇಕು ಎಂದು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ. ಮರಿಗಳು ಬೇಟೆಯಾಡಲು ಅಥವಾ ಉತ್ತಮ ಸುರಕ್ಷಿತ ಸ್ಥಳವನ್ನು ಹುಡುಕಲು ಯತ್ನಿಸುತ್ತಿರುವಾಗ, ಮನುಷ್ಯರು ಅವುಗಳನ್ನು ಮೃಗಾಲಯಗಳಿಗೆ ತಲುಪಿಸುತ್ತಿದ್ದಾರೆ. ಹೀಗಾಗಿ, ಅವುಗಳನ್ನು ಕಾಡಿನಲ್ಲಿ ಬಿಡಲಾಗುವುದಿಲ್ಲ. ಅಂತಹ ಮರಿಗಳು ಬದುಕುಳಿಯುವುದಿಲ್ಲ. ಹಾಗಾಗಿ ಅವು ಕೂಡ ರಕ್ಷಣಾ ಕೇಂದ್ರದಲ್ಲಿ ಉಳಿಯುತ್ತವೆ” ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶುವೈದ್ಯರ ಪ್ರೋಟೋಕಾಲ್ ಪ್ರಕಾರ, ಕೋರೆಹಲ್ಲುಗಳು ಅಥವಾ ಉಗುರುಗಳು ಮುರಿದುಹೋದ, ತೀವ್ರವಾಗಿ ಗಾಯಗೊಂಡ, ಬೇಟೆಯಾಡಲು ಸಾಧ್ಯವಾಗದಂತಹ ಪ್ರಾಣಿಗಳನ್ನು ಮಾತ್ರ ಸೆರೆಹಿಡಿದು ರಕ್ಷಣಾ ಕೇಂದ್ರಗಳಲ್ಲಿ ಇರಿಸಬೇಕು.

“ಸೆರೆಯಲ್ಲಿರುವ 50% ರಷ್ಟು ಪ್ರಾಣಿಗಳನ್ನು ಮೃಗಾಲಯಗಳಿಂದ ಬಿಡುಗಡೆ ಮಾಡಲು ಯೋಗ್ಯವಾಗಿವೆ. ಆದರೆ, ಸೆರೆಯಲ್ಲಿ ಉಳಿದಿವೆ. ಆದ್ದರಿಂದ, ಅವುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರವು ಕಠಿಣ ರಕ್ಷಣಾ ಮತ್ತು ಪುನರ್ವಸತಿ ನಿಯಮಗಳನ್ನು ರೂಪಿಸಬೇಕು” ಎಂದು ಹಿರಿಯ ಅರಣ್ಯ ಇಲಾಖೆಯ ಪಶುವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...