Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...