Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...